ಬಂಟ್ವಾಳ: ಕನಕದಾಸ ಜಯಂತಿ ಆಚರಣೆ

KannadaprabhaNewsNetwork |  
Published : Nov 19, 2024, 12:52 AM IST
ಬಂಟ್ವಾಳ: ಕನಕದಾಸ ಜಯಂತಿ ಆಚರಣೆ | Kannada Prabha

ಸಾರಾಂಶ

ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಸೋಮವಾರ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಸೋಮವಾರ ಆಚರಿಸಲಾಯಿತು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮವನ್ನು ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಾಹಿತ್ಯದ ಮೂಲಕ ಜೀವನ ಪಾಠ ಸಾರಿದ ಕನಕದಾಸರು, ಜಾತಿ, ಮತ, ಕುಲಗಳ ಭೇದ ಭಾವವನ್ನು ದಾಟಿ, ಸಮಾಜದ ಪಿಡುಗುಗಳ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದವರು ಎಂದರು.ಇದೇ ಸಂದರ್ಭದಲ್ಲಿ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತನಾಡಿ, ಭಗವಂತನನ್ನು ಕೂಡ ತನ್ನಷ್ಟಕ್ಕೆ ಸೆಳೆದ ಶ್ರೇಷ್ಠ ಸಾಸರು, ನಮ್ಮ ತುಳುನಾಡಿನ ಉಡುಪಿಯಲ್ಲಿ ಕನಕ ಕಿಂಡಿಯ ಮುಖಾಂತರ ಶ್ರೀ ಕೃಷ್ಣನ ದರ್ಶನ ಪಡೆದರು. ನಮಗೆಲ್ಲಾರಿಗೂ ಕೂಡ ಶ್ರೇಷ್ಠ ವಿಚಾರಗಳನ್ನು ದರ್ಶನ ಮಾಡುವಂತ ಅವಕಾಶ ಕನಕ ಜಯಂತಿಯಂದು ಸಿಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಎಂ.ಎನ್. ರವಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು