ಬಂಟ್ವಾಳ ತಾಲೂಕು ಪಂಚಾಯಿತಿ ಜಮಾಬಂಧಿ

KannadaprabhaNewsNetwork |  
Published : Aug 28, 2024, 12:49 AM IST
 ಬಂಟ್ವಾಳ ತಾಲೂಕು ಪಂಚಾಯಿತಿ ಜಮಾಬಂಧಿ ಮಂಗಳವಾರ ಬಿ.ಸಿ.ರೋಡಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆಯಿತು. | Kannada Prabha

ಸಾರಾಂಶ

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂಧಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿ ಜಮಾ ಖರ್ಚಿನ ಕುರಿತು ನಿಖರವಾದ ಮಾಹಿತಿ ಪಡೆದುಕೊಳ್ಳಲು ಜಮಾಬಂದಿ ನಡೆಸಲಾಗುತ್ತಿದ್ದು, ತಾಲೂಕು ಪಂಚಾಯಿತಿ ಅಧೀನ ಇಲಾಖೆಗಳು ಎಷ್ಟು ಹಣ ಉಳಿಕೆಯಾಗಿದೆ, ಯಾವ ಕಾರಣಕ್ಕಾಗಿ ಉಳಿಕೆಯಾಗಿದೆ ಎಂಬ ಕುರಿತು ಲಿಖಿತ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಯರಾಮ್ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ನಡೆಯುವ ಜಮಾಬಂಧಿ ಕಾರ್ಯಕ್ರಮದಲ್ಲಿ ಅವರು ಸೂಚನೆ ನೀಡಿದರು.

ಯೋಜನೆಗಳ ಅನುಷ್ಠಾನ ಸಂದರ್ಭ ಪಾರದರ್ಶಕತೆ ಒದಗಿಸುವುದು ಮತ್ತು ನಾಗರಿಕರಿಗೆ ಮಾಹಿತಿ ಒದಗುವಂತೆ ಮಾಡುವುದಲ್ಲದೆ, ತಾ.ಪಂ. ಮತ್ತು ಇತರ ಅಧೀನ ಇಲಾಖೆಗಳಲ್ಲಿನ ಕಾರ್ಯಕ್ರಮಗಳು ಖರ್ಚು ವೆಚ್ಚಗಳ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ದೊರಕುವಂತೆ ಮಾಡುವ ಉದ್ದೇಶ ಇದರಲ್ಲಿದ್ದು, ಘೋಶ್ವಾರೆಯಲ್ಲಿ ನಮೂದಿಸಲಾದ ಯೋಜನೇತರ ಗುರಿ, ಬಿಡುಗಡೆಗೊಂಡ ಹಣ ಹಾಗೂ ಖರ್ಚಾದ ಹಣದೊಂದಿಗೆ ಉಳಿಕೆಯಾದ ಅನುದಾನವನ್ನು ಪ್ರಸ್ತಾಪಿಸಿದ ಅವರು, ಇದು ಯಾವ ಕಾರಣಕ್ಕಾಗಿ ಆಗಿದೆ ಎಂಬ ಕುರಿತು ಪ್ರತಿಯೊಂದು ಇಲಾಖೆಗಳಿಂದ ಮಾಹಿತಿ ಪಡೆದುಕೊಂಡರು.

ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಸಿಪಿಡಿಒ, ಕೃಷಿ, ತೋಟಗಾರಿಕೆಪಶುವೈದ್ಯ ಇಲಾಖೆ, ಪಂಚಾಯತ್ ರಾಜ್, ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಿತ ಹಲವು ವಿಚಾರಗಳಿಗೆ ಸಂಬಂಧಿಸಿ ಖರ್ಚುವೆಚ್ಚನ ನಿರ್ವಹಣೆ, ಉಳಿಕೆಯ ಮಾಹಿತಿ ಅವರು ಪಡೆದುಕೊಂಡರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಮಾತನಾಡಿ, ಕಳೆದ ವರ್ಷ ಹಲವಾರು ಅಭಿವೃದ್ಧಿ ಕಾರ್ಯಗಳ ಅನುಷ್ಠಾನವನ್ನು ಮಾಡಲಾಗಿದೆ ಎಂಬ ಮಾಹಿತಿ ನೀಡಿದರು.

ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಎ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪಕ ಪ್ರಕಾಶ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್, ಸಿಡಿಪಿಒ ಮಮ್ತಾಜ್, ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್, ತಾಪಂ ಸಿಬ್ಬಂದಿ ಚಂದ್ರಾವತಿ, ಕುಶಾಲಪ್ಪ ಮತ್ತಿತರರು ಪೂರಕ ಮಾಹಿತಿ ನೀಡಿದರು. ತಾಪಂ ಇಒ ಸಚಿನ್ ಕುಮಾರ್ ಸ್ವಾಗತಿಸಿದರು. ಸಿಬಂದಿ ಚಂದ್ರಾವತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ