ಅನಂತಾಡಿ -ನೆಟ್ಲಮುಡ್ನೂರು ರಸ್ತೆ ಅಭಿವೃದ್ಧಿಗೆ ಚಾಲನೆ

KannadaprabhaNewsNetwork |  
Published : Jun 11, 2026, 01:30 AM IST
ರಸ್ತೆ ಅಭಿವೃದ್ಧಿಗೆ ಚಾಲನೆ | Kannada Prabha

ಸಾರಾಂಶ

ಅನಂತಾಡಿ ಮತ್ತು ನೆಟ್ಲ ಮುಡ್ನೂರು ಎರಡೂ ಗ್ರಾಮವನ್ನು ಸಂಪರ್ಕಗೊಳಿಸುವ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿಸುವ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ವಿಶೇಷ ಅನುದಾನ 40 ಲಕ್ಷ ರು. ಅನುದಾನ ಬಿಡುಗಡೆಯಾಗಿದ್ದು, ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೂಮಿ ಪೂಜೆ ನೆರವೇರಿಸಿದರು.

ಬಂಟ್ವಾಳ: ಅನಂತಾಡಿ ಮತ್ತು ನೆಟ್ಲ ಮುಡ್ನೂರು ಎರಡೂ ಗ್ರಾಮವನ್ನು ಸಂಪರ್ಕಗೊಳಿಸುವ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿಸುವ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ವಿಶೇಷ ಅನುದಾನ 40 ಲಕ್ಷ ರು. ಅನುದಾನ ಬಿಡುಗಡೆಯಾಗಿದ್ದು, ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅತ್ಯಂತ ಪುರಾತನ ಮತ್ತು ಬಹಳ ಪ್ರಸಿದ್ಧಿ ಇದೆ. ಇಲ್ಲಿಗೆ ಬರುವ ಭಕ್ತಾದಿಗಳಿಗೆ ಅನುಕೂಲವಾಗಲೆಂದು ಮತ್ತು ಎರಡು ಗ್ರಾಮದ ಜನರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಒಟ್ಟು 40 ಲಕ್ಷ ರು. ವೆಚ್ಚದಲ್ಲಿ ಈ ರಸ್ತೆಗೆ ಕಾಂಕ್ರೀಟಿಕರಣ ಮಾಡಲಾಗುತ್ತದೆ ಎಂದರು. ಗುತ್ತಿಗೆದಾರರು ಉತ್ತಮವಾಗಿ ಕೆಲಸ ನಿರ್ವಹಿಸಿ, ಗುಣಮಟ್ಟದ ರಸ್ತೆಯನ್ನು ಜನರಿಗೆ ನೀಡುತ್ತಾರೆ ಎಂಬ ಭರವಸೆ ಇದೆ. ಕಾಮಗಾರಿ ವೇಳೆ ಗ್ರಾಮದ ಜನರ ಸಹಕಾರ ಕೂಡ ಅತ್ಯಗತ್ಯವಾಗಿದ್ದು, ಜನರಿಗೂ ತೊಂದರೆಯಾಗದಂತೆ ಹೊಂದಾಣಿಕೆಯಿಂದ ಕಾಮಗಾರಿಯನ್ನು ನಡೆಸುವಂತೆ ಶಾಸಕರು ತಿಳಿಸಿದರು.

ಜನರ ಬೇಡಿಕೆಗಳು ಇನ್ನೂ ಅನೇಕ ಇವೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಬರುವ ಎಲ್ಲ ಅನುದಾನವನ್ನು ಬಳಸಿಕೊಂಡು ಆದ್ಯತೆಯ ನೆಲೆಯಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಅವರು ಭರವಸೆ ನೀಡಿದರು.ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಂಡಲದ ಕೇತ್ರ ಕಾರ್ಯದರ್ಶಿ ಸನತ್ ಕುಮಾರ್ ರೈ, ಬಿಜೆಪಿ ಮಾಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ಕಾರ್ಯದರ್ಶಿ ನಾಗೇಶ್ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಸುರೇಶ್ ,ಉಪಾಧ್ಯಕ್ಷೆ ಸಂಧ್ಯಾವಿಶ್ವನಾಥ, ಕರಿಂಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನರೇಂದ್ರ ರೈ ನೆಲ್ತೊಟ್ಟು, ಬಿಜೆಪಿ

ಗ್ರಾಮ ಪ್ರಮುಖ್ ರಾದ ಮಹಾಬಲ ಪೂಜಾರಿ ಬಾಕಿಲ, ನವೀನ ಆಚಾರ್ಯ, ಶಿವರಾಮ್ ಶೆಟ್ಟಿ ಕರಿಂಕ, ಧನಂಜಯ ಗೌಡ ಮೀನಾವು ಮಹಿಳಾ ಮೋರ್ಚಾ ,ಉಪಾಧ್ಯಕ್ಷೆ ಗೀತಾಚಂದ್ರಶೇಖರ್ ಗೋಳಿಕಟ್ಟೆ, ಬಿಜೆಪಿ ಪ್ರಮಖರಾದ ಜ್ಯೋತಿ ಹೆಗ್ಡೆ, ನವೀನ್ ಶೆಟ್ಟಿ, ಶಕೀಲ ಕೃಷ್ಣಪ್ಪ ಪೂಜಾರಿ, ಅಶೋಕ್ ರೈ ಎಲ್ಕಾಜೆ, ಬಾಲಕೃಷ್ಣ ನಾಯ್ಕ್, ಬಾಲಕೃಷ್ಣ ಪೂಜಾರಿ ಸಾಯಿ , ದಯಾನಂದ ಗೌಡ,ರಾಮಪ್ಪ ಗೌಡ,ಜಯರಾಮ್ ಆಚಾರಿ , ರಮೇಶ್ ಗೌಡ,ಕೃಷ್ಣಪ್ಪ ಗೌಡ, ಶಿವಾನಂದ ಶೆಟ್ಟಿ, ಕುಸುಮಧರ, ಧರ್ನಪ್ಪ ಗೌಡ,ಗಣೇಶಾನಂದ ಶೆಟ್ಟಿ, ಉದಯ ಗೌಡ ಕೊಂಕನೋಡಿ, ವಸಂತ್ ರಾಜ್ ಭಟ್,ಚೇತನ್ ರೈ, ಸ್ಥಳದಾನಿಗಳಾದ ರಾಧಾ ಕೃಷ್ಣ ಭಾಗವತ್, ಕೆ.ಟಿ.ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವೆಗೆ ಬಂದು ರೈತರಿಗೆ ಹೆದರಿ ಕಾಲ್ಕಿತ್ತ ಅಧಿಕಾರಿಗಳು!
ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿ