ಬಪ್ಪನಾಡು ದೇವಳ ಜಾತ್ರೆ, ಬಾಕಿಮಾರು ದೀಪೋತ್ಸವ

KannadaprabhaNewsNetwork |  
Published : Mar 30, 2024, 12:46 AM IST
ಬಪ್ಪನಾಡು ದೇವಳ ಜಾತ್ರೆ  ಬಾಕಿ ಮಾರು ದೀಪೋತ್ಸವ | Kannada Prabha

ಸಾರಾಂಶ

30ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಮಾರ್ಚ್‌ 31 ರಂದು ಬ್ರಹ್ಮರಥೋತ್ಸವ ನಡೆಯಲಿದೆ.

ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಶ್ರೀ ದೇವರ ಉತ್ಸವ ಬಲಿ, ಬೊಂಬೆ ರಥೋತ್ಸವ, ಸ್ವರ್ಣ ಪಲ್ಲಕಿ ಉತ್ಸವ, ಬಾಕಿಮಾರು ದೀಪೋತ್ಸವ ಹಾಗೂ ಕಟ್ಟೆ ಪೂಜೆ ನಡೆಯಿತು.

ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಎನ್‌.ಎಸ್‌. ಮನೋಹರ ಶೆಟ್ಟಿ, ಕಾರ್ಯನಿರ್ವಣಾಧಿಕಾರಿ ಜಯಮ್ಮ ಮತ್ತಿತರರು ಉಪಸ್ಥಿತರಿದ್ದರು. 30ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಮಾರ್ಚ್‌ 31 ರಂದು ಬ್ರಹ್ಮರಥೋತ್ಸವ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ
ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ