ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಕೆ.ಎನ್.ನಳಿನಿ, ಕಾರ್ಯಪಾಲಕ ಎಂಜಿನಿಯರ್ ಎಂ.ಪಿ.ಮುತ್ತುರಾಜು ಇತರರು ಇದ್ದರು.
ಈ ಸಂದರ್ಭ ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಮಾತನಾಡಿದ ಲೋಕೋಪಯೋಗಿ ಸಚಿವರು ತಡೆಗೋಡೆಯ ದುರಸ್ತಿ ಕಾರ್ಯವನ್ನು ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ಕಡೆಗೆ ತೆರಳುವ ರಸ್ತೆಯ ಬಲಭಾಗದಲ್ಲಿ ಕೆಲ ವರ್ಷಗಳ ಹಿಂದೆ, ಜಿಲ್ಲಾಡಳಿತ ಭವನದ ಸುರಕ್ಷತೆಗಾಗಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಇದು ನಂತರದ ವರ್ಷದ ಭಾರೀ ಮಳೆಯ ಸಂದರ್ಭ ಕುಸಿತಕ್ಕೆ ಒಳಗಾಗುವ ಅಪಾಯವನ್ನು ಎದುರಿಸಿದ ಹಿನ್ನೆಲೆ, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭ ಸಂಬಂಧಪಟ್ಟ ಎಂಜಿನಿಯರ್ಗಳು ಸಚಿವರಿಗೆ ಮಾಹಿತಿ ನೀಡಿದರು.
ಪ್ರಮುಖರಾದ ಚಂದ್ರಮೌಳಿ, ಟಿ.ಪಿ.ರಮೇಶ್, ತೆನ್ನೀರ ಮೈನಾ, ಕೆ.ಜಿ. ಪೀಟರ್, ಅಂಬೆಕಲ್ಲು ನವೀನ್, ಪ್ರಕಾಶ್ ಆಚಾರ್ಯ, ಯಾಕೂಬ್ ಸೇರಿದಂತೆ ಪ್ರಮುಖರು ಹಾಜರಿದ್ದರು.