22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್‌ ಪರೀಕ್ಷೆ

KannadaprabhaNewsNetwork |  
Published : Feb 13, 2026, 03:00 AM IST
12ಎಮ್‌ಬಿಎಲ್1 | Kannada Prabha

ಸಾರಾಂಶ

ಗುಣಮಟ್ಟದ ಶಿಕ್ಷಣವು ಪ್ರತಿಯೊಬ್ಬ ವಿದ್ಯಾವಂತ ಮಕ್ಕಳಿಗೆ ದೊರಕಬೇಕೆನ್ನುವ ನಿಟ್ಟಿನಲ್ಲಿ ಬಿಎಎಸ್ ಟ್ಯಾಲೆಂಟ್ ಅವಾರ್ಡ್‌ ಪರೀಕ್ಷೆಯನ್ನು ಫೆ.22ರ ಬಿಎಎಸ್‌ ಶಿಕ್ಷಣ ಸಂಸ್ಥೆ ನಡೆಸಿದ್ದು, ಇದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದು ಬಿಎಎಸ್ ಶಾಲಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಹಾಂತಗೌಡ ಬಿರಾದಾರ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಗುಣಮಟ್ಟದ ಶಿಕ್ಷಣವು ಪ್ರತಿಯೊಬ್ಬ ವಿದ್ಯಾವಂತ ಮಕ್ಕಳಿಗೆ ದೊರಕಬೇಕೆನ್ನುವ ನಿಟ್ಟಿನಲ್ಲಿ ಬಿಎಎಸ್ ಟ್ಯಾಲೆಂಟ್ ಅವಾರ್ಡ್‌ ಪರೀಕ್ಷೆಯನ್ನು ಫೆ.22ರ ಬಿಎಎಸ್‌ ಶಿಕ್ಷಣ ಸಂಸ್ಥೆ ನಡೆಸಿದ್ದು, ಇದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದು ಬಿಎಎಸ್ ಶಾಲಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಹಾಂತಗೌಡ ಬಿರಾದಾರ ಮನವಿ ಮಾಡಿದರು.

ತಾಲೂಕಿನ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣದ ಜೊತೆಗೆ ಭವಿಷ್ಯದಲ್ಲಿ ಎಲ್ಲ ರೀತಿಯ ಅನುಕೂಲಕರ ದೊರಕಿಸಿಕೊಡುವ ಗುರಿಯನ್ನು ಬಿಎಎಸ್‌ ಶಿಕ್ಷಣ ಸಂಸ್ಥೆ ಹೊಂದಿದೆ. ಫೆ.22ರ ಬೆಳಗ್ಗೆ 10 ಗಂಟೆಗೆ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸಲು ಫೆ.21 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ನಮ್ಮ ಶಾಲೆಯ ಅಧಿಕೃತ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದು. ಅಲ್ಲದೇ ಅರ್ಜೀಗಳ ನೋಂದಣಿಗಾಗಿ ಮೊ.9035054453, 9035054454, 7760333143, 9035054450 ಕರೆಮಾಡಿ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದರು.ಶಾಲಾ ಆಢಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾತನಾಡಿ, ಬಿಎಎಸ್ ಟ್ಯಾಲೆಂಟ್ ಅವಾರ್ಡ್‌ ಪರೀಕ್ಷೆಯಲ್ಲಿ ಭಾಗಿಯಾಗಿ ರ್‍ಯಾಂಕ್‌ ಪಡೆಯುವ ಮಕ್ಕಳಿಗೆ ಶಾಲಾ ಫೀ ಜೊತೆಗೆ ಪ್ರತಿ ವಿಭಾಗದಲ್ಲೂ 10 ಸಾಧಕರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ. ಪರೀಕ್ಷೆಯಲ್ಲಿ 1 ರಿಂದ 10 ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಫೀಯಲ್ಲಿ ಶೇ.20ರಷ್ಟು, 11 ರಿಂದ 20ನೇ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಶೇ.15ರಷ್ಟು ರಿಯಾಯತಿ, 21 ರಿಂದ 30 ರ್‍ಯಾ₹ಕ್‌ ಪಡೆದ ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಹಾಗೂ 31 ರಿಂದ 40ನೇ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಫೀ ನಲ್ಲಿ ಶೇ.5ರಷ್ಟು ರಿಯಾಯತಿ ದೊರಕಲಿದೆ ಎಂದು ತಿಳಿಸಿದರು.ಶಾಲಾ ಪ್ರಾಚಾರ್ಯೆ ರಶಿಕಾ ನಾಯ್ಕ, ಉಪಪ್ರಾಚಾರ್ಯರಾದ ಅಲ್ಮಾನ.ಕೆ ಮಾತನಾಡಿ, ಬಿಎಎಸ್‌ ಶಾಲೆಯಲ್ಲಿ ಈಗಾಗಲೇ ಉನ್ನತಮಟ್ಟದ ಶಿಕ್ಷಣ ನೀಡುವಲ್ಲಿ ನಮ್ಮ ಶಾಲಾ ವ್ಯವಸ್ಥಾಪಕರು ಸಕಲ ಅನುಕೂಲ ಮಾಡಿಕೊಟ್ಟಿದ್ದಾರೆ. ಇದರೊಂದಿಗೆ ಗ್ರಾಮೀಣ ಭಾಗದಲ್ಲಿ ಸಿಬಿಎಸ್‌ಸಿ ಶಾಲೆಯನ್ನು ತೆರೆದು ಪ್ರತಿಯೊಬ್ಬ ಗ್ರಾಮೀಣ ಮಕ್ಕಳಿಗೆ ಉನ್ನತಮಟ್ಟದ ಶಿಕ್ಷಣ ದೊರಕಿಸಿಕೊಡಬೇಕು ಎನ್ನುವುದೇ ಸಂಸ್ಥೆಯ ಮುಖ್ಯಗುರಿಯಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಪಾಲಿಗೆ ವೈದ್ಯರು ದೇವರಾಗಿ, ರಾಕ್ಷಸರಾಗಬೇಡಿ: ಡಿಸಿ ಸಂಗಪ್ಪ
ನಾಡಿದ್ದು ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ