ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ

KannadaprabhaNewsNetwork |  
Published : Jul 05, 2025, 12:18 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ವೀರಶೈವ, ಲಿಂಗಾಯತ ಎನ್ನುವುದೆಲ್ಲಾ ಮುಗಿದ ಕಥೆಯಾಗಿದ್ದು, ಬಸವಣ್ಣನನ್ನು ಒಪ್ಪಿಕೊಳ್ಳುವ ಎಲ್ಲರೂ ನಮ್ಮವರೇ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ನುಡಿದಿದ್ದಾರೆ.

- ಪೂರ್ವಭಾವಿ ಸಭೆಯಲ್ಲಿ ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಶ್ರೀ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ವೀರಶೈವ, ಲಿಂಗಾಯತ ಎನ್ನುವುದೆಲ್ಲಾ ಮುಗಿದ ಕಥೆಯಾಗಿದ್ದು, ಬಸವಣ್ಣನನ್ನು ಒಪ್ಪಿಕೊಳ್ಳುವ ಎಲ್ಲರೂ ನಮ್ಮವರೇ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ನುಡಿದರು.

ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ಶುಕ್ರವಾರ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ಲಿಂಗಾಯತ ಎಂಬುದನ್ನು ಸೇರಿಸಿದ ನಂತರ ಸಮಸ್ಯೆಯೇ ಬಗೆಹರಿದಿದೆ ಎಂದರು.

ಈಗ ವೀರಶೈವ, ಲಿಂಗಾಯತವೆಂಬ ಸಮಸ್ಯೆ ಇಲ್ಲ. ಲಿಂಗ, ವಯಸ್ಸು, ಜಾತಿ, ಮತ, ಪಂಥ ಬೇಧವಿಲ್ಲದೇ ಎಲ್ಲರನ್ನೂ ಅಪ್ಪಿಕೊಳ್ಳುವ ವ್ಯವಸ್ಥೆಯನ್ನು ಬಸವ ಸಂಸ್ಕೃತಿ ಅಭಿಯಾನದ ಮೂಲಕ ಮತ್ತೆ ತರಬೇಕಿದೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೆ.1ರಿಂದ ಅ.1ರವರೆಗೆ ಬಸವ ಸಂಸ್ಕೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಬಸವಾದಿ ಶರಣರ ತತ್ವಗಳನ್ನು ಎಲ್ಲೆಡೆ ಪ್ರಸಾರ ಮಾಡುವುದು, ಗ್ರಾಮ, ಪಟ್ಟಣಗಳ ಜನರನ್ನು ಸಂಘಟಿಸುವುದು, ಧಾರ್ಮಿಕ ಸಭೆಗಳನ್ನು ಏರ್ಪಡಿಸಿ, ಬಸವಾದಿ ಶರಣರು ಬೋಧಿಸಿದ ಧಾರ್ಮಿಕ ವಿಚಾರ ಆಚರಣೆಯಲ್ಲಿ ತರುವುದೇ ಅಭಿಯಾನದ ಉದ್ದೇಶ. ಬಸವಾದಿ ಶರಣರ ಭಿತ್ತಿಚಿತ್ರಗಳ ಬಸವ ರಥದ ಮೆರವಣಿಗೆ, ಸಾರ್ವಜನಿಕರು, ವಿದ್ಯಾರ್ಥಿ, ಯುವಜನರ ಜೊತೆಗೆ ಸಂವಾದ, ಪಾದಯಾತ್ರೆ, ಬಹಿರಂಗ ಸಭೆ, ವಚನ ಸಂಗೀತ, ಉಪನ್ಯಾಸ, ನಾಟಕ ಪ್ರದರ್ಶನ ಇತ್ಯಾದಿ ಚಟುವಟಿಕೆ ತಿಂಗಳ ಕಾಲ ನಡೆಯಲಿವೆ ಎಂದು ವಿವರಿಸಿದರು.

ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ಮಾತನಾಡಿ, ಸೆ.15ರಂದು ದಾವಣಗೆರೆ ಜಿಲ್ಲೆಗೆ ಅಭಿಯಾನ ಆಗಮಿಸಲಿದೆ. ಇದಕ್ಕಾಗಿ ಸ್ಥಳೀಯರ ಸಮಿತಿ ರಚನೆಯಾಗಬೇಕು. ಅಭಿಯನದ ಖರ್ಚಿಗೆ ಆರ್ಥಿಕ ನೆರವನ್ನು ದಾನಿಗಳು, ಸಾರ್ವಜನಿಕರಿಂದ ಸಂಗ್ರಹಿಸಿ, ಜಮಾ ಖರ್ಚಿನ ಲೆಕ್ಕವನ್ನು ಪಾರದರ್ಶಕವಾಗಿ ಇಡಬೇಕು. ಎಲ್ಲ ಜಿಲ್ಲೆಗಳ ಜಿಲ್ಲಾ ಸಮಿತಿ ಜೊತೆಗೆ ಸಂಪರ್ಕದಲ್ಲಿದ್ದು, ಮಾಹಿತಿ ಒದಗಿಸಬೇಕು. ಸಲಹೆ, ಸೂಚನೆ ನೀಡುವುದು ಸಮಿತಿ ಜವಾಬ್ಧಾರಿ. ಬಸವ ಸಂಸ್ಕೃತಿ ಅಭಿಯಾನ ಬಸವಾದಿ ಶಿವಕರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ ಸದಾಶಯ ಹೊಂದಿದೆ ಎಂದರು.

ಹಿರಿಯ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ, ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ, ಹಿರಿಯ ಸಾಹಿತಿ ಎಸ್.ಟಿ. ಶಾಂತ ಗಂಗಾಧರ ಇತರರು ಇದ್ದರು. ಬಸವಪರ ಸಂಘಟನೆಗಳ ಪ್ರತಿನಿಧಿಗಳು, ಬಸವಾಭಿಮಾನಿಗಳು ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ಸಲಹೆ-ಸೂಚನೆ ನೀಡುವ ಜೊತೆಗೆ ಆರ್ಥಿಕ ದೇಣಿಗೆ ಘೋಷಣೆ ಮಾಡಿದರು.

- - -

-4ಕೆಡಿವಿಜಿ6.ಜೆಪಿಜಿ: ಡಾ.ಗುರುಬಸವ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸಭೆ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ