ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ವೀರಶೈವ ಸಮಾಜದವರ ಮನೆಗಳಿಗೆ ತೆರಳಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ ಮಾತನಾಡಿದ ಅವರು, 27ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ವಿವಿಧ ವೀರಶೈವ ಸಂಘಟನೆಗಳು ಮತ್ತು ಸಮಾಜದ ಮುಖಂಡರು ಸೇರಿ ನಡೆಸುತ್ತಿದ್ದು, ಈ ಕಾರ್ಯಕ್ರಮಕ್ಕೆ ವೀರಶೈವ ಸಮಾಜದ ಸರ್ವರೂ ಆಗಮಿಸಬೇಕೆಂದು ಮನವಿ ಮಾಡಿದರು.
ಬಸವ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಗೆ ಆಗಮಿಸುವವರಿಗೂ 200 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಶರಣರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು. ವೀರಶೈವ ಮುಖಂಡರಾದ ಎಲ್.ಪಿ. ರವಿಕುಮಾರ್, ಪುಟ್ಟರಾಮು, ಮಂಜುನಾಥ್, ಸಿದ್ದೇಶ್ ಇದ್ದರು.