ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂಜೆ 6 ಗಂಟೆಗೆ ಹಾಜರಿರುವುದು. ಸಂಜೆ 6.30ಕ್ಕೆ ಪೂಜೆ ಸಲ್ಲಿಸಿದ ನಂತರ ರಾತ್ರಿ 7ಕ್ಕೆ. ಬಸವಜ್ಯೋತಿ ಪಾದಯಾತ್ರೆಗೆ ಬಸವನ ಬಾಗೇವಾಡಿ ವಿರಕ್ತಮಠದ ಪ.ಪೂ. ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.ಈ ಯಾತ್ರೆ ಮಸಬಿನಾಳ, ಉಕ್ಕಲಿ, ಉಕುಮನಾಳ ಮಾರ್ಗವಾಗಿ ಶಿವಗಿರಿ ತಲುಪಲಿದೆ. ನಂತರ ಏ.20ರಂದು ಬೆಳಗ್ಗೆ ನಗರದ ಬಸವೇಶ್ವರ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. 50 ಕಿ.ಮೀ ಮಾರ್ಗದೂದ್ದಕ್ಕೂ ಪಾದಯಾತ್ರಿಗಳಿಗೆ ಅಲ್ಪೋಪಹಾರ ಮತ್ತು ಲಘುಪಾನಿಯ ವ್ಯವಸ್ಥೆ ಕಲ್ಪಿಸಲಾಗುವುದು. ಸ್ವಯಂ ಪ್ರೇರಿತರಾಗಿ 150ಕ್ಕೂ ಹೆಚ್ಚು ಬಸವಾನುಯಾಯಿಗಳು ನೋಂದಣಿ ಮಾಡಿಕೊಂಡಿದ್ದು ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಟಿ-ಶರ್ಟ್, ಪದಕ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.
ಕೋಟಿವೃಕ್ಷ ಅಭಿಯಾನ ಸಂಚಾಲಕ ಡಾ.ಮುರುಗೇಶ ಪಟ್ಟಣಶೆಟ್ಟಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಯದರ್ಶಿ ಸೋಮಶೇಖರ ಸ್ವಾಮಿ, ಸದಸ್ಯರಾದ ಶಾಂತೇಶ ಕಳಸಗೊಂಡ, ಸಂತೋಷ ಔರಸಂಗ, ಡಾ.ರಾಜು ಯಲಗೊಂಡ, ಶಂಭು ಕರ್ಪೂರಮಠ, ಡಿ.ಕೆ.ತಾವಸೆ, ಗುರುಶಾಂತ ಕಾಪಸೆ, ಅಶ್ಪಾಕ ಮನಗೂಳಿ, ಸಿದ್ದು ನಾಯ್ಕೋಡಿ, ಸೋಮು ಮಠ, ವಿಜಯಕುಮಾರ ಕೋರೆ, ಅಮೀತ ಬಿರಾದಾರ ಉಪಸ್ಥಿತರಿದ್ದರು.