ಅತಿಕ್ರಮಣ ರಸ್ತೆ ತೆರವಿಗೆ ಒತ್ತಾಯಿಸಿ ಬಸವನಪುರ ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Jun 25, 2025, 12:33 AM IST
24ಕೆಎಂಎನ್ ಡಿ21 | Kannada Prabha

ಸಾರಾಂಶ

ಮದ ರಸ್ತೆಯನ್ನು ಕೆಲವು ಜಮೀನಿನ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸುವಂತೆ ತಾಲೂಕು ಕಚೇರಿ ಎದುರು ಹಲವು ಬಾರಿ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಿದರೂ ಸಹ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಗೆಜ್ಜಲಗೆರೆ ಗ್ರಾಪಂ ವ್ಯಾಪ್ತಿಯ ಬಸವನಪುರ ಗ್ರಾಮದ ಅತಿಕ್ರಮಣ ರಸ್ತೆ ತೆರವುಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಪಂ ಮಾಜಿ ಅಧ್ಯಕ್ಷ, ಸದಸ್ಯ ಹರೀಶ್ ನೇತೃತ್ವದಲ್ಲಿ ಗ್ರಾಮದಿಂದ ಆಗಮಿಸಿದ್ದ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ತಾಲೂಕು ಆಡಳಿತ, ತಾಪಂ ಮತ್ತು ಗ್ರಾಪಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಬಸವನಪುರ ಗ್ರಾಮದ ಬೆಂಗಳೂರು ಮೈಸೂರು ರಸ್ತೆಗೆ ಹೊಂದಿಕೊಂಡಿರುವ ಅತಿಕ್ರಮಣ ರಸ್ತೆಯನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ ಧೋರಣೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮದ ರಸ್ತೆಯನ್ನು ಕೆಲವು ಜಮೀನಿನ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸುವಂತೆ ತಾಲೂಕು ಕಚೇರಿ ಎದುರು ಹಲವು ಬಾರಿ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಿದರೂ ಸಹ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ ಎಂದು ಹರೀಶ್ ಆರೋಪಿಸಿದರು.

ಈ ಸಂಬಂಧ ತಾಲೂಕು ಆಡಳಿತ ಮಧ್ಯ ಪ್ರವೇಶ ಮಾಡಿ ರಸ್ತೆ ಒತ್ತುವರಿದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವ ಮೂಲಕ ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ರೂಪಿಸದಿದ್ದಲ್ಲಿ ಗ್ರಾಮಸ್ಥರ ಒಡಗೂಡಿ ತಾಲೂಕು ಕಚೇರಿ ಎದುರು ಅನಿದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಂತರ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಗ್ರೇಟ್ ಟು ತಹಸೀಲ್ದಾರ್ ಸೋಮಶೇಖರ್, ಭೂಮಾಪನಾಧಿಕಾರಿ ಭುವನ ಕುಮಾರ್ ಹಾಗೂ ತಾಪಂ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಧರಣಿ ನಿರತರು ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವೈರಮುಡಿ, ಕೃಷ್ಣ, ಶಿವಣ್ಣ,ಪುಟ್ಟಸ್ವಾಮಿ, ದಾಸಯ್ಯ, ಪುಟ್ಟ ಲಿಂಗಮ್ಮ, ಸತ್ಯ ಪ್ರೇಮ ಕುಮಾರಿ, ಜಯಮ್ಮ, ಪ್ರೇಮ, ನಿಂಗಮ್ಮ, ಪುಷ್ಪ, ಲಕ್ಷ್ಮಮ್ಮ, ಸುಧಾ, ಜಯಮ್ಮ , ಲಕ್ಷ್ಮಿ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ