- ಪಾಂಡೋಮಟ್ಟಿಯಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಡಾ.ಗುರುಬಸವ ಸ್ವಾಮೀಜಿ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಓಂ ಶ್ರೀ ಗುರುಬಸವಲಿಂಗಾಯ ನಮಃ ಎಂಬ ಶರಣ ವಾಕ್ಯವು ವಿಶ್ವದ ಮಂತ್ರವಾಗಿದೆ. ಇದು ಹೆಮ್ಮೆಪಡುವ ವಿಚಾರ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ.ಗುರುಬಸವ ಮಹಾಸ್ವಾಮೀಜಿ ನುಡಿದರು.ಶನಿವಾರ ಸಂಜೆ ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣ ಮತ್ತು ಜಗನ್ಮಾತೆ ಅಕ್ಕ ಮಹಾದೇವಿ ಜಯಂತ್ಯುತ್ಸವ ಹಾಗೂ 870ನೇ ಮಾಸಿಕ ಶಿವಾನುಭವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಶತಮಾನಗಳಿಂದ ತುಳಿತಕ್ಕೆ ಒಳಗಾಗಿ, ಬಳಲಿ ಹೋಗಿದ್ದ ಶೂದ್ರರು, ಮಹಿಳೆಯರು, ದಲಿತರು ಬಂದು ಅನುಭವ ಮಂಟಪದಲ್ಲಿ ಒಗ್ಗೂಡಿದರು. ನಾವುಗಳು ಇಂದು ಅವರ ತತ್ವದ ಅಡಿಯಲ್ಲಿ ನಡೆಯಬೇಕು. ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡಾಗ ಬೇಡುವ ಅವಶ್ಯಕತೆ ಇಲ್ಲ ಎಂಬುದು ಶರಣ ನೀತಿಯಾಗಿದೆ. ಸಮಾಜದ ಮತ್ತು ಧರ್ಮದ ಸೇವೆ ಮಾಡಿದವರನ್ನು ಸ್ಮರಿಸುವುದು ನಮ್ಮ ಧರ್ಮ ಎಂದು ತಿಳಿಸಿದರು.
ಸಂತೆಬೆನ್ನೂರಿನ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಧ್ಯಾಪಕಿ ಜಿ.ಟಿ. ಜ್ಯೋತಿ, ಶಿವಮೊಗ್ಗದ ಲೋಕಾಯುಕ್ತ ಇಲಾಖೆಯ ಡಿ.ವೈ.ಎಸ್.ಪಿ. ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ವೀರಬಸಪ್ಪ ಕುಸಲಾಪುರ, ಡಾ.ಇಂಚರ, ಇಂಪನ ಮಾತನಾಡಿದರು.
- - -
ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದ ವಿರಕ್ತ ಮಠದಲ್ಲಿ ಏರ್ಪಡಿಸಿದ್ದ 870ನೇ ಮಾಸಿಕ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಪಾಂಡೋಮಟ್ಟಿ ಶ್ರೀಗಳು ಮಾತನಾಡಿದರು.