ಕನ್ನಡಪ್ರಭ ವಾರ್ತೆ ಹೊನ್ನಾಳಿ
ತಾಲೂಕು ಅಡಳಿತದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕ್ರಾಂತಿಯೋಗಿ ಬಸವಣ್ಣ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬಸವಣ್ಣ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದರು.
ದೇಶದ ಇತಿಹಾಸದಲ್ಲಿ ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ಬಿಟ್ಟುಹೋಗಿರುವ ಆದರ್ಶಗಳಿಂದಾಗಿ ಇಂದು ಸಮಾಜದಲ್ಲಿ ಶಾಂತಿ, ಸಹಬಾಳ್ವೆಯಿಂದ ಜನ ಬದುಕುವಂತಾಗಿದೆ ಎಂದರು.ನಾಡಿನ ಇತಿಹಾಸದಲ್ಲಿ ಬಂದು ಹೋಗಿರಿವ ಸುಮಾರು 32 ಮಾಹಾತ್ಮರ ಜಯಂತಿಗಳನ್ನು ಆಚರಿಸಲು ಸರ್ಕಾರ ಆದೇಶ ಮಾಡಿರುವ ಉದ್ದೇಶ ಇಂದಿನ ಪೀಳಿಗೆಯವರು ಕೊನೆ ಪಕ್ಷ ಇಂತಹ ಮಹಾನ್ ಪುರುಷರ ಜೀವನ ಸಾಧನೆಗಳನ್ನು ತಿಳಿದುಕೊಳ್ಳಬೇಕು ಎನ್ನುವುದಾಗಿದೆ ಆದರೆ ಇಂದು ಮಾಹತ್ಮರ ಮಾರ್ಗದರ್ಶನ, ಆಚರಣೆ ಕೇವಲ ಭಾಷಣಗಳಿಗೆ ಸೀಮಿತವಾಗಿದೆ ಎಂದು ಹೇಳಿದರು.
ಸೋಮವಾರ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಶಾಸಕ ಡಿ.ಜಿ.ಶಾಂತನಗೌಡರು ಆಗಮಿಸಿ ಅಧಿಕಾರಿಗಳಿಗಾಗಿ ಕೆಲ ಕಾಲ ಕಾಯುವಂತಾಯಿತು. ನಂತರ ಗ್ರೇಡ್ -2 ತಹಸೀಲ್ದಾರ್ ಸುರೇಶ್ ಹಾಗೂ ಕೆಲ ಮುಖಂಡರು ಆಗಮಿಸಿದರೇ ಹೊರತು ಗ್ರೇಡ್ -1 ತಹಸೀಲ್ದಾರ್ ಹಾಗೂ ಉಪವಿಗಾಧಿಕಾರಿ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು, ಇದರಿಂದ ಶಾಸಕರು ಬೇಸರಗೊಂಡ ಪ್ರಸಂಗ ನಡೆಯಿತು.
ಎಸ್ಎಂಎಫ್ಸಿ ಪ್ರಥಮ ದರ್ಜೇ ಕಾಲೇಜಿನ ಪ್ರಾಂಶುಪಾಲ ಕೆ.ನಾಗೇಶ್ ಅವರು ಬಸವಣ್ಣನವರು ಬದುಕು, ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.