ಹೂವಿನಹಡಗಲಿ: ವೇದ, ಶಾಸ್ತ್ರ, ಪುರಾಣಗಳ ಮೂಲಕ ದೇವರು, ದೇಗುಲ ನಿರ್ಮಿಸಿ, ಜಾತಿ ವ್ಯವಸ್ಥೆ ಜಾರಿಗೆ ತಂದವರನ್ನು ಬಸವಣ್ಣ 900 ವರ್ಷಗಳ ಹಿಂದೆಯೇ ಪ್ರಶ್ನಿಸಿ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅವರು ಎಲ್ಲಿಯೂ ನಾನು ಲಿಂಗಾಯತ ಧರ್ಮದವನು ಎಂದು ಹೇಳಿಕೊಂಡಿಲ್ಲ ಎಂದು ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ.ಚಿನ್ನಸ್ವಾಮಿ ಸೋಸಲೆ ಹೇಳಿದರು.ಇಲ್ಲಿನ ಜಿಬಿಆರ್ ಕಾಲೇಜಿನಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭಾ, ಜಿಲ್ಲಾ ಉಪಾಧ್ಯಕ್ಷ ಪಿ.ವಿಜಯಕುಮಾರ್, ಯುವ ಜನಾಂಗ ಬಸವಣ್ಣನವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಪ್ರಾಚಾರ್ಯ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮಾನಿಹಳ್ಳಿ ಬಸವರಾಜ, ಕಾರ್ಯದರ್ಶಿ ಅಕ್ಕಿ ಮಲ್ಲಿಕಾರ್ಜುನ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಾ.ಸತೀಶ್ ರೆಡ್ಡಿ, ಕೋಡಿಹಳ್ಳಿ ಮುದುಕಪ್ಪ, ಐಗೋಳ್ ಸುಭಾಶ್ಚಂದ್ರ, ಎಂ.ಮಲ್ಲಿಕಾರ್ಜುನ, ಮುಂಡವಾಡ ಉಮೇಶ್, ಕೆ.ಎಂ. ಉದಾಸಿ, ರಮೇಶ್, ಹಾಲೇಶ್ ಇದ್ದರು.