ಬಸವಣ್ಣನವರ ಕಾಯಕವೇ ಕೈಲಾಸ ಇಂದಿಗೂ ಪ್ರಸ್ತುತ: ಡಾ.ವೀರಣ್ಣ ಚರಂತಿಮಠ

KannadaprabhaNewsNetwork |  
Published : May 11, 2024, 12:31 AM IST
ವಿಶ್ವಗುರು ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ಬಸವಣ್ಣನ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. | Kannada Prabha

ಸಾರಾಂಶ

ಎಲ್ಲರಿಗೂ ಸಮಬಾಳು, ಎಲ್ಲರಿಗೂ ಸಮಪಾಲು ಎಂದು ಸಾರಿದ ವಿಶ್ವಗುರು ಬಸವಣ್ಣ ಸಮಾನತೆ, ಕಾಯಕಕ್ಕೆ ಮಹತ್ವ ನೀಡಿದ್ದಾರೆ. ಅವರ ಕಾಯಕವೇ ಕೈಲಾಸ ತತ್ವ ಇಂದಿಗೂ ಪ್ರಸ್ತುತ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಎಲ್ಲರಿಗೂ ಸಮಬಾಳು, ಎಲ್ಲರಿಗೂ ಸಮಪಾಲು ಎಂದು ಸಾರಿದ ವಿಶ್ವಗುರು ಬಸವಣ್ಣ ಸಮಾನತೆ, ಕಾಯಕಕ್ಕೆ ಮಹತ್ವ ನೀಡಿದ್ದಾರೆ. ಅವರ ಕಾಯಕವೇ ಕೈಲಾಸ ತತ್ವ ಇಂದಿಗೂ ಪ್ರಸ್ತುತ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಬಿ.ವಿ.ವಿ.ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಕ್ಕನ ಬಳಗ, ಶಿವಾನುಭವ ಸಮಿತಿ, ಶರಣ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ವಿಶ್ವಗುರು ಬಸವ ಜಯಂತಿ ನಿಮಿತ್ತ ಶುಕ್ರವಾರ ಹಮ್ಮಿಕೊಂಡ ಬಸವಣ್ಣನ ಭಾವಚಿತ್ರದ ಭವ್ಯ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

12ನೇ ಶತಮಾನದಲ್ಲಿಯೇ ಸಮಾಜಿಕ ಕ್ರಾಂತಿಯ ಹರಿಕಾರರಾಗಿ ಅನುಭವ ಮಂಟಪದ ಮುಖಾಂತರ ಪ್ರಜಾಪ್ರಭುತ್ವದ ಕಲ್ಪನೆ ನೀಡಿ, ಎಲ್ಲ ಸಮುದಾಯದ ಎಲ್ಲ ಜನರಿಗೂ ಸಮಬಾಳು, ಸಮಪಾಲು ಎಂಬ ತತ್ವದಡಿ ಸಮಾನತೆ ಸಾರುವ ಮೂಲಕ ಕಾಯಕ ಮಹತ್ವವನ್ನು ತಿಳಿಸಿದ್ದು ವಿಶ್ವಗುರು ಬಸವಣ್ಣ ಎಂದರು.

ಟೀಕಿನಮಠದ ಮಲ್ಲಿಕಾರ್ಜುನ ಶ್ರೀಗಳು, ಬಿಲ್ ಕೆರೂರಿನ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಿದ ಶೋಭಾಯಾತ್ರೆ, ಬಿ.ವಿ,ವಿ. ಸಂಘ ಬೀಳೂರ ಗುರುಬಸವ ದೇವಸ್ಥಾನದಿಂದ ಬೃಹತ್‌ ಮೆರವಣಿಗೆ ಪ್ರಾರಂಭವಾಗಿ ಕಾಲೇಜು ರಸ್ತೆ, ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ರಸ್ತೆ, ಪೊಲೀಸ್ ಚೌಕ್, ವಲ್ಲಬಾಯಿ ಚೌಕ್, ಅಡತ್ ಬಜಾರ್, ಟೀಕಿನ ಮಠ, ಚರಂತಿಮಠದ ಶಿವಾನುಭವ ಮಂಟಪ ತಲುಪಿ ಶೋಭಾಯಾತ್ರೆ ಮುಕ್ತಾಯಗೊಂಡಿತು.

ಮೆರವಣಿಗೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಎನ್. ಪಾಟೀಲ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಅಶೋಕ ಸಜ್ಜನ ಬೇವೂರ, ಗುರುಬಸವ ಸೂಳಿಬಾವಿ, ಮಹಾಂತೇಶ ಶೆಟ್ಟರ, ಚಂದ್ರಶೇಖರ ಶೇಟ್ಟರ, ಬಸವರಾಜ ಮುಕೂಪಿ, ಬಸವರಾಜ ಯಂಕಂಚಿ, ಪಂಡಿತ ಆರಾಧ್ಯ, ಅಶೋಕ ರೇಣುಕೊಪ್ಪ, ಶರಣಪ್ಪ ಗುಳೆದ, ವಿಜಯಕುಮಾರ ಅಂಗಡಿ, ಕುಮಾರ ಹಿರೇಮಠ, ಚೆನ್ನಯ್ಯ ಬಳೂಲಮಠ, ಪ್ರಕಾಶ ರೇವಡಿಗಾರ, ಎ.ಎಸ್. ಪಾವಟೆ, ಶಿವಾನಂದ ಟವಳಿ, ರಾಜೇಂದ್ರ ತಪಶೆಟ್ಟಿ, ಸಂಗಯ್ಯ ಗಣಾಚಾರಿ, ಸುರೇಶ ಮಜ್ಜಗಿ, ಬಸವರಾಜ ತಡಲಗಿ ಅಕ್ಕನ ಬಳಗ ಸದಸ್ಯರು, ರೈತ ಬಾಂಧವರು ಸೇರಿದಂತೆ ಅನೇಕರು ಭಾಗವಹಿಸಿದ್ದರು.ಗಮನ ಸೆಳೆದ ಎತ್ತುಗಳು:

ಬಸವಜಯಂತಿ ನಿಮಿತ್ತ ರೈತಾಪಿ ಜನರು ಎತ್ತುಗಳಿಗೆ ಸ್ನಾನ ಮಾಡಿಸಿ ಅವುಗಳನ್ನು ಶೃಂಗರಿಸಿ ಪೂಜೆ ಸಲ್ಲಿಸಿದ ಸುಮಾರು 25ಕ್ಕೂ ಹೆಚ್ಚು ಜೋಡಿ ಎತ್ತುಗಳು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದವು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌