ಬಸವಣ್ಣ ಸಮಾಜ ಸುಧಾರಣೆ ಮಾಡಿದ ಮಹಾಶರಣ

KannadaprabhaNewsNetwork |  
Published : May 08, 2025, 12:37 AM IST
(6ಎನ್.ಆರ್.ಡಿ1 ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರೋ. ಎಂ.ಎಸ್.ಯಾವಗಲ್ ಮಾತನಾಡುತ್ತಿದ್ದಾರೆ.)  | Kannada Prabha

ಸಾರಾಂಶ

ಬಸವಣ್ಣನವರು ಕೇವಲ ಕರ್ನಾಟಕದ ಸಾಂಸ್ಕೃತಿಕ ನಾಯಕ ಮಾತ್ರವಲ್ಲದೆ, ಜಾಗತಿಕ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿ ಗೌರವಿಸುವ ಕಾಲ ದೂರವಿಲ್ಲ

ನರಗುಂದ: 12ನೇ ಶತಮಾನದಲ್ಲಿ ವಿಶ್ವ ಗುರು ಬಸವಣ್ಣವರು ಸಮಾಜದಲ್ಲಿರುವ ಮೇಲು ಕೀಳು ತೆಗೆದು ಹಾಕಿ ಎಲ್ಲರೂ ಸಮಾನರೆಂದು ಜಗತ್ತಿಗೆ ಸಾರಿದ್ದಾರೆ ಎಂದು ನಿವೃತ್ತ ಪ್ರೊ.ಎಂ.ಎಸ್. ಯಾವಗಲ್ ಹೇಳಿದರು.

ಅವರು ಪಟ್ಟಣದ ಶ್ರೀ ಸಿದ್ದೇಶ್ವರ ಕಾಲೇಜಿನಲ್ಲಿ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಕದಳಿ ಮಹಿಳಾ ವೇದಿಕೆ, ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ನಿಮಿತ್ತ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗಜ್ಯೋತಿ ಬಸವಣ್ಣನವರು ಶ್ರಮ ಸಂಸ್ಕೃತಿ ಹಾಗೂ ಸಮ ಸಂಸ್ಕೃತಿಯ ಪ್ರತಿಪಾದಕರಾಗಿದ್ದರು. ಬಸವಣ್ಣನವರು ಕೇವಲ ಕರ್ನಾಟಕದ ಸಾಂಸ್ಕೃತಿಕ ನಾಯಕ ಮಾತ್ರವಲ್ಲದೆ, ಜಾಗತಿಕ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿ ಗೌರವಿಸುವ ಕಾಲ ದೂರವಿಲ್ಲ ಎಂದರು.

ಕನ್ನಡ ಪ್ರಾಧ್ಯಾಪಕ ಡಾ.ಎಸ್.ವಿ. ಮನಗುಂಡಿವರು ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಡಾ. ಬಿ.ಎಂ. ಜಾಬಣ್ಣವರ, ಪ್ರೊ. ಸಿ.ಎಸ್. ಸಾಲುಟಗಿಮಠ, ಉಪನ್ಯಾಸಕ ಎಂ.ಪಿ. ಕುಲಕರ್ಣಿ, ಪ್ರಾಧ್ಯಾ ಪಕ ಬಿ.ಬಿ. ಕೊಣ್ಣೂರ, ಸಿದ್ದಲಿಂಗಪ್ಪ, ರಾಮು, ದ್ಯಾಮಣ್ಣ ಗೊಬ್ಬರಗುಂಪಿ ಹಾಗೂ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಜಿ. ಮಣ್ಣೂರಮಠ, ಕಾರ್ಯದರ್ಶಿ ಮಂಜುನಾಥ ಘಾಳಿ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು ಇದ್ದರು.

ಎಸ್. ಗಂಗಾಧರಯ್ಯ ಸ್ವಾಗತಿಸಿದರು. ಮಂಜುನಾಥ ನಿಂಗನಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಡಾ.ನಾಗಪ್ಪ ಸುರಳಿಕೇರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 30 ಮಂದಿ ತಂಡ ರಚಿಸಿದ ಸರ್ಕಾರ
ಗ್ರಾಪಂಗಳಲ್ಲಿ 10 ವರ್ಷಗಳಲ್ಲಿ ₹50000 ಕೋಟಿ ಅಕ್ರಮ: ಶಾಸಕ