ಬಸವಣ್ಣನವರ ಚಿಂತನೆಗಳು ಸರ್ವಕಾಲಕ್ಕೂ ಪ್ರಸುತ್ತ

KannadaprabhaNewsNetwork |  
Published : May 10, 2024, 11:47 PM IST
ಹರಪನಹಳ್ಳಿ ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜಗಜ್ಯೋತಿ, ಬಸವೇಶ್ವರ ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

800 ವರ್ಷಗಳ ಹಿಂದೆಯೇ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜವನ್ನು ಸುಧಾರಣೆಗೆ ತರಲು ಶ್ರಮಿಸಿದ್ದರು

ಹರಪನಹಳ್ಳಿ: ಅಸಮಾನತೆಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ನಡೆದ ಜಗಜ್ಯೋತಿ, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

800 ವರ್ಷಗಳ ಹಿಂದೆಯೇ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜವನ್ನು ಸುಧಾರಣೆಗೆ ತರಲು ಶ್ರಮಿಸಿದ್ದರು ಎಂದ ಅವರು, ಹೇಮರೆಡ್ಡಿ ಮಲ್ಲಮ್ಮ ಕೂಡ ಬಸವಣ್ಣನವರ ತತ್ವದ ಆಧಾರದ ಮೇಲೆ ಸಾಗಿದ್ದರು ಎಂದರು.

ತಹಶೀಲ್ದಾರ ಗಿರೀಶಬಾಬು ಮಾತನಾಡಿ, ಸಮಾಜದಲ್ಲಿ ಬೇರು ಬಿಟ್ಟಿದ್ದ ಮೇಲು-ಕೀಳು, ಜಾತಿ ವ್ಯವಸ್ಥೆ ವಿರುದ್ಧ ಬಸವಣ್ಣನವರು ನಿರಂತರ ಹೋರಾಟ ಮಾಡಿದರು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ನಟರಾಜ, ಪುರಸಭಾ ಸದಸ್ಯ ಗೊಂಗಡಿ ನಗರಾಜ ಸಮಾಜದ ಮುಖಂಡರಾದ ಪಾಟೀಲ್ ಬೆಟ್ಟನಗೌಡ, ಅಂಬ್ಲಿ ಮಂಜುನಾಥ, ಚನ್ನನಗೌಡ, ಅಡವಿಹಳ್ಳಿ ಪೂಜಾರ ಬಸವರಾಜ, ಎಚ್.ಎಂ.ಬಸವರಾಜಯ್ಯ, ದೇವರಾಜ, ಶೇಖರ ಪಾಟೀಲ್, ಬಸವನಗೌಡ, ರಾಜು, ದಿವಾಕರ, ಪ್ರಭಾಕರ, ತಿಮ್ಮಲಾಪುರ ನಾಗರಾಜ, ಸುಮಾ ಮಹೇಶ, ರುದ್ರಮುನಿ ಇದ್ದರು.

ಹರಪನಹಳ್ಳಿ ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜಗಜ್ಯೋತಿ, ಬಸವೇಶ್ವರ ಜಯಂತಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಧ ಮಕ್ಕಳಾಗಿಯೂ ಇವರ ಸಾಧನೆ ಅಪ್ರತಿಮ
ಉತ್ತಮ ತಳಿಗಳ ಹಸು ಖರೀದಿಸಲು ಸಾಲಸೌಲಭ್ಯ: ಡಾ.ರಾಜಣ್ಣ