ಕನ್ನಡಪ್ರಭ ವಾರ್ತೆ ಪುತ್ತೂರು
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ದೀಪಪ್ರಜ್ವಲನೆ ಮಾಡಿ ಅವರು ಮಾತನಾಡಿದರು.
‘ಕಳ ಬೇಡ ಕೊಲ ಬೇಡ’ ಎನ್ನುತ್ತಾ ವ್ಯಕ್ತಿಗಳ ನಡುವೆ ಮತ್ಸರ-ಅಸಹ್ಯ ಬೇಡ ಎಂದು ಹೇಳಿದ ಕ್ರಾಂತಿಯೋಗಿ ಬಸವಣ್ಣ ಅವರ ಬದುಕೇ ಸಮಾಜಕ್ಕೊಂದು ಉತ್ತಮ ಸಂದೇಶವಾಗಿದೆ. ಕೇವಲ ಕಾಟಾಚಾರಕ್ಕೆ ಅವರ ಜಯಂತಿಗಳ ಆಚರಣೆಯಾಗಬಾರದು. ಈ ಆಚರಣೆ ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಹಾಗಿರಬೇಕು. ಅವರ ಜೀವನದ ಆದರ್ಶ ತತ್ವಗಳ ಮೂಲಕ ಸಮಾಜದ ಆರೋಗ್ಯ ಕಾಪಾಡಿದ ವ್ಯಕ್ತಿತ್ವ ಅವರದ್ದಾಗಿದೆ ಎಂದರು.ಕಾಯಕವೇ ಕೈಲಾಸ ಎಂದು ಕಾಯಕಕ್ಕೆ ಗೌರವ ನೀಡಿರುವ ಕವಿ ಮತ್ತು ದಾರ್ಶನಿಕರಾದ ಬಸವೇಶ್ವರ ಜಯಂತಿ ಹಲವು ವರ್ಷಗಳಿಂದ ಸರ್ಕಾರಿ ಮಟ್ಟದಲ್ಲಿ ಅಚರಣೆ ಮಾಡುತ್ತಾ ಬರಲಾಗುತ್ತಿದೆ. ಸಾಮಾಜಿಕ ಪರಿಸ್ಥಿತಿ ತೀರಾ ಹದೆಗೆಟ್ಟಿದ್ದ ೧೨ನೇ ಶತಮಾನದಲ್ಲಿ ಬಸವಣ್ಣ ಅವರು ಸಮಾಜಕ್ಕೆ ತನ್ನನ್ನು ತಾನು ಅರ್ಪಿಸಿಕೊಂಡು ಸಾಮಾಜ ಸುಧಾರಣೆಗೆ ಮುಂದಾಗಿದ್ದರು ಎಂದರು.ಅಕ್ಷರದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ಇದ್ದರು.
ಕಂದಾಯ ಇಲಾಖೆಯ ದಯಾನಂದ್ ಡಿ.ಟಿ ಸ್ವಾಗತಿಸಿ, ನಿರೂಪಿಸಿದರು.