ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ಸಾಹಿತಿ ಎಸ್.ಎಫ್. ಆದಿ

KannadaprabhaNewsNetwork |  
Published : Apr 24, 2026, 01:15 AM IST
ಕಾರ್ಯಕ್ರಮವನ್ನು ಸಾಹಿತಿ ಎಸ್.ಎಫ್. ಆದಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಸವಣ್ಣನರು ವಚನಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ.

ಲಕ್ಷ್ಮೇಶ್ವರ: ಜಗ ಬೆಳಗಿದ ಮಹಾ ಬೆಳಕು ವಿಶ್ವಗುರು ಬಸವೇಶ್ವರರು 12ನೇ ಶತಮಾನದಲ್ಲಿಯೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಕಾಯಕ ಕ್ರಾಂತಿಗೆ ನಾಂದಿ ಹಾಡಿದ ಜಗಜ್ಯೋತಿ ಬಸವೇಶ್ವರರು ಜಗತ್ತು ಕಂಡ ಅಪ್ರತಿಮ ಹೋರಾಟಗಾರ, ಸಮಾಜ ಸುಧಾರಕ, ಧಾರ್ಮಿಕ ಗುರು ಹಾಗೂ ಕ್ರಾಂತಿಕಾರಿ ಎಂದು ಹಿರಿಯ ಸಾಹಿತಿ ಎಸ್.ಎಫ್. ಆದಿ ತಿಳಿಸಿದರು.

ಪಟ್ಟಣದ ಮಂಜುನಾಥ ಚಾಕಲಬ್ಬಿ ಅವರ ಸ್ವಗೃಹ ಸನ್ಮಿತ ಸದನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಮಾಸದ ಮಾತು ಕಾರ್ಯಕ್ರಮ ಸರಣಿಯಲ್ಲಿ ''ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರ ಜಯಂತಿ'' ಕಾರ್ಯಕ್ರಮದಲ್ಲಿ ಮಾತನಾಡಿ, ಬಸವಣ್ಣನರು ವಚನಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಮಾಜಿ ಸದಸ್ಯ ಪ್ರವೀಣ ಬಾಳಿಕಾಯಿ ಮಾತನಾಡಿ, ವಚನಗಳ ಮೂಲಕ ಬಸವಣ್ಣನವರು ಅಂದಿನ ಜಾತಿ ವ್ಯವಸ್ಥೆ, ಮೇಲು, ಕೀಳು, ಬಡವ, ಶ್ರೀಮಂತ, ಅಕ್ಷರಸ್ಥ, ಅನಕ್ಷರಸ್ಥ, ಗಂಡು, ಹೆಣ್ಣು ಎನ್ನುವ ಭೇದಭಾವ ತೊಡೆದು ಹಾಕಿ ಸಮಾನತೆ ಸಾರಿದರು. ಎಲ್ಲ ಸಮುದಾಯದ ವ್ಯಕ್ತಿಗಳನ್ನೊಳಗೊಂಡ ಅನುಭವ ಮಂಟಪ ಸ್ಥಾಪಿಸಿದರು. ಇದುವೇ ಜಗತ್ತಿನ ಮೊದಲ ಸಂಸತ್‌ ಆಗಿದೆ ಎಂದರು. ವಿಶ್ರಾಂತ ದೈಹಿಕ ಪರಿವೀಕ್ಷಣಾಧಿಕಾರಿ ಆರ್.ಎನ್. ಪಂಚಭಾವಿ ಚಾಕಲಬ್ಬಿ ಅವರ ಮಹಾಮನೆಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸುತ್ತಿರುವುದು ಅರ್ಥಪೂರ್ಣ. ಏಕೆಂದರೆ 82 ವರ್ಷದ ಶಿವಪುತ್ರಪ್ಪ ಚಾಕಲಬ್ಬಿ ಇಂದಿಗೂ ಕಾಯಕದಲ್ಲಿಯೇ ದೇವರನ್ನು ಕಾಣುತ್ತಿರುವುದು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಈಶ್ವರ ಮೆಡ್ಲೇರಿ, ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಈಗಾಗಲೇ 175 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟನೆ ಮಾಡಿ ಮತ್ತಷ್ಟು ರಚನಾತ್ಮಕ ಕಾರ್ಯಕ್ರಮ ಯೋಜಿಸಿದೆ. ಇದಕ್ಕೆ ತಾಲೂಕು ಪರಿಸರದ ಸಾಹಿತಿಗಳು, ಸಾಹಿತ್ಯಾಭಿಮಾನಿಗಳು, ಪತ್ರಿಕಾ ವರದಿಗಾರರು ಹಾಗೂ ಕನ್ನಡಾಭಿಮಾನಿಗಳ ಸಹಕಾರ ಹಾಗೂ ಮಾರ್ಗದರ್ಶನವೇ ಮುಖ್ಯ ಕಾರಣ ಎಂದರು.

ಹಿರಿಯ ಕಾಯಕ ಜೀವಿ ಶಿವಪುತ್ರಪ್ಪ ಚಾಕಲಬ್ಬಿ, ಉಪನ್ಯಾಸ ನೀಡಿದ ಹಿರಿಯ ಸಾಹಿತಿ ಎಸ್.ಎಫ್. ಆದಿ, ವಿಶ್ರಾಂತ ಶಿಕ್ಷಕಿ ಎಸ್.ಎಂ. ಹಾಳದೋಟದ ಅವರನ್ನು ಸನ್ಮಾನಿಸಲಾಯಿತು. ಶ್ರೀನಿಧಿ ಶಂಕರ ಶಿಳ್ಳಿನ, ವಿಶ್ರಾಂತ ಶಿಕ್ಷಕ ವಿ.ಎಂ. ಹೂಗಾರ ಬಸವೇಶ್ವರರ ವಚನ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರು: ಗಾಳಿ ಮಳೆಗೆ ಮರ, ಕಂಪೌಂಡ್‌ ಬಿದ್ದು ಮನೆ, ವಾಹನ ಜಖಂ
ಕುಲಶೇಖರ: ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ ಮೆರವಣಿಗೆ