ಕನ್ನಡಪ್ರಭ ವಾರ್ತೆ ಕಲಬುರಗಿ
ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಸರಣಿ ಉಪನ್ಯಾಸ ಮಾಲೆಯಲ್ಲಿ ಬಸವ ವಾದ ಮತ್ತು ಸಂವಿಧಾನದ ಆಶಯಗಳು ವಿಷಯವಾಗಿ ಉಪನ್ಯಾಸ ನೀಡಿದರು.
ಬಸವವಾದ ನಮಗೆ ಅರ್ಥ ಆಗಬೇಕು ಆದರೆ ನಾವು ಮೊದಲು ಸಂವಿಧಾನವನ್ನು ಓದಬೇಕು. ಆಗ ಬಸವಣ್ಣ ಅರ್ಥ ಆಗುತ್ತಾರೆ, ಭಾರತದ ನೆಲದಲ್ಲಿ ಅನೇಕರು ಮಹನಿಯರು ಶತಶತಮಾನಗಳಿಂದ ಬಹಳ ವರ್ಷಗಳಿಂದ ಮನುವಾದದ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಆದರೂ ಜಾತಿ ವ್ಯವಸ್ಥೆಯನ್ನು ಸಂವಿಧಾನ ಜಾರಿಗೆ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ಅದು ಜೀವಂತವಾಗಿ ಉಳಿದಿದೆ. ಬಸವಣ್ಣ 12ನೇ ಶತಮಾನದಲ್ಲಿಯೇ ಲಿಂಗ ಸಮಾನತೆಯನ್ನು ಮಾಡಿದರು ಎಂದರು.ಭಾರತವನ್ನು ಮರಳಿ ಶಿಲಾಯುಗಕ್ಕೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಈ ದೇಶದಲ್ಲಿ ನಡಿತಿದೆ. ಅದನ್ನು ಬಸವಾದಿಗಳು ಬಾಬಾಸಾಹೇಬ್ ಡಾ. ಅಂಬೇಡ್ಕರ್ ವಾದಗಳು ಅರ್ಥ ಮಾಡಿಕೊಳ್ಳಬೇಕು ಎಂದರು.
ಪ್ರಮುಖರಾದ ಸಾಹಿತಿ ಆರ್.ಕೆ. ಹುಡಗಿ, ರೇಣುಕಾ ಸಿಂಗೆ, ಪ್ರಭುಲಿಂಗ ಮಹಾಗಾಂವಕರ್ಹಾ, ಕನ್ನಡ ಅಧ್ಯಯನ ಸಂಸ್ಥೆಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.