ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ
ವಿಶ್ವಗುರು ಬಸವಣ್ಣನವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗದೇ ಜೀವನದ ಸತ್ಯಗಳನ್ನು ವಚನಗಳಲ್ಲಿ ತಿಳಿಸುವ ಮೂಲಕ ಇಡೀ ಮನುಕುಲಕ್ಕೆ ದಾರಿ ದೀಪವಾಗಿದ್ದಾರೆ ಎಂದು ಕೆಪೆಕ್ ಅಧ್ಯಕ್ಷ ಬಿ.ಎಚ್.ಹರೀಶ್ ತಿಳಿಸಿದರು.
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ 8ನೇ ವಯಸ್ಸಿನಲ್ಲಿ ಅಸಮಾನತೆ ವಿರುದ್ಧ ಧ್ವನಿ ಎತ್ತಿದ ಮಹಾನ್ ಪುರುಷ ವಿಶ್ವಗುರು ಬಸವಣ್ಣ. ತನಗೆ ಜನಿವಾರ ಧಾರಣೆ ಮಾಡುವುದಾದರೆ ಅಕ್ಕ ನಾಗಮ್ಮನಿಗೆ ಜನಿವಾರ ಧಾರಣೆ ಏಕಿಲ್ಲ ಎಂದು ಪ್ರಶ್ನಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಬಾಲ್ಯದಲ್ಲಿಯೇ ಮುನ್ನುಡಿ ಬರೆದಿದ್ದರು.ಕಾಯಕವೇ ಕೈಲಾಸ ಎಂದು ಪ್ರತಿಪಾದಿಸಿದ ಬಸವಣ್ಣ ಕೆಲಸದಲ್ಲಿಯೇ ದೇವರನ್ನು ಕಾಣುವಂತೆ ಜನರಲ್ಲಿ ಅರಿವು ಮೂಡಿಸಿ ದ್ದರು. ಯಾವ ಕೆಲಸವೂ ಮೇಲಲ್ಲ, ಯಾವ ಕೆಲಸವೂ ಕೀಳಲ್ಲ ಎಂದು ಸಾರಿದರು. ಪ್ರಪಂಚದ ಮೊದಲ ಸಂಸತ್ ಅನುಭವ ಮಂಟಪವನ್ನು ಕಟ್ಟಿದ್ದು ಬಸವಣ್ಣನವರು ಎಂಬುದು ಹೆಮ್ಮೆಯ ಸಂಗತಿ ಎಂದರು.ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಯಾರು ಜಾತೀಯತೆ ನಿವಾರಿಸಲು ಶ್ರಮಿಸಿದರೋ ಅವರನ್ನು ಇಂದು ಜಾತಿಯ ಚೌಕಟ್ಟಿನಲ್ಲಿ ಬಂಧಿಸುತ್ತಿರುವುದು ಅವರ ತತ್ವ ಹಾಗೂ ಆದರ್ಶಗಳಿಗೆ ಮಾಡುತ್ತಿರುವ ಅಗೌರವ.. ಬಸವಣ್ಣನವರು ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ ಎಂದಿದ್ದರು. ಆದರಿಂದು ನಾವು ಸ್ಥಾವರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆಯೇ ಹೊರತು ಜಂಗಮ ತತ್ವ ಅಳವಡಿಸಿಕೊಳ್ಳುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಮಹಾನ್ ವ್ಯಕ್ತಿಗಳನ್ನು ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ತಪ್ಪು. 12ನೇ ಶತಮಾನದಲ್ಲಿ ಬಸವಣ್ಣನವರು ಸಮಸಮಾಜ ನಿರ್ಮಾಣಕ್ಕೆ ಹೋರಾಟ ನಡೆಸಿದರೆ, 20ನೇ ಶತಮಾನದಲ್ಲಿ ಅಂಬೇಡ್ಕರ್ ಅವರು ಬಸವಣ್ಣನವರ ವಿಚಾರಧಾರೆಗಳಿಗೆ ಸಂವಿಧಾನದ ಮೂಲಕ ಅಧಿಕೃತ ಮುದ್ರೆ ಒತ್ತಿದರು ಎಂದರು.
ಬಸವೇಶ್ವರರ ಕುರಿತು ಸಾಹಿತಿ ತಿಪ್ಪೆರುದ್ರಪ್ಪ ಉಪನ್ಯಾಸ ನೀಡಿದರು. ಈ ವೇಳೆ ತಾಲೂಕು ದಂಡಾಧಿಕಾರಿ ರೇಷ್ಮಾ ಶೆಟ್ಟಿ, ಡಿವೈಎಸ್ಪಿ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಉಪಸ್ಥಿತರಿದ್ದರು.----ಬಾಕ್ಸ್---
ಇದನ್ನು ಗಮನಿಸಿದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಇತ್ತೀಚಿನ ದಿನಗಳಲ್ಲಿ ಮಹಾನ್ ಪುರುಷರ ಜಯಂತಿಗಳು ಸಾಂಕೇತಿಕವಾಗಿ ನಡೆಯುವಂತಾಗಿರುವುದು ಬೇಸರದ ಸಂಗತಿ ಎಂದರು. ಇನ್ನು ಶಾಸಕ ತಮ್ಮಯ್ಯ, ಮಹಾನ್ ಪುರುಷರ ಜಯಂತಿ ಸಮಾರಂಭದ ಬಗ್ಗೆ ತಾವೂ ಸಹ ಕಾಳಜಿ ವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಜಯಂತಿ ಆಚರಣೆ ಬಗ್ಗೆ ಸಭೆ ನಡೆಸಿಲ್ಲ, ಆಹ್ವಾನಿಸಿಲ್ಲ
-- ಕೋಟ್ --
- ಡಾ.ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯಫೋಟೊ: 1. ಬಸವ ಜಯಂತಿ ಕಾರ್ಯಕ್ರಮದಲ್ಲಿ ಜನರೇ ಇರದೆ ಮುಂಭಾಗದ ಒಂದು ಸಾಲಿನ ಕುರ್ಚಿಗಳು ಭರ್ತಿಯಾಗಿರಲಿಲ್ಲ
ಫೋಟೊ:2. ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಕೆಪೆಕ್ ಅಧ್ಯಕ್ಷ ಬಿ.ಎಚ್.ಹರೀಶ್ಉದ್ಘಾಟಿಸಿದರು. ಸಿಟಿ ರವಿ, ತಮ್ಮಯ್ಯಇತರರಿದ್ದರು.