ಜಗತ್ತಿನ ಸಾಂಸ್ಕೃತಿಕ ನಾಯಕ ಬಸವಣ್ಣ: ಸುತ್ತೂರು ಶ್ರೀ ಬಣ್ಣನೆ

KannadaprabhaNewsNetwork |  
Published : Jul 26, 2026, 01:30 AM IST
ಸುತ್ತೂರು ಶ್ರೀ | Kannada Prabha

ಸಾರಾಂಶ

ಇಡೀ ವಿಶ್ವವೇ ಬಸವಣ್ಣನವರ ತತ್ವಾದರ್ಶಗಳನ್ನು ಇಷ್ಟಪಡುತ್ತಿದ್ದು, ಇವರು ಸಾಂಸ್ಕೃತಿಕ ನಾಯಕರಾಗಿದ್ದಾರೆ. ಇವರ ಅದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.

ಯಳಂದೂರಿನಲ್ಲಿ ಅದ್ಧೂರಿ ಬಸವ ಜಯಂತಿ ಆಚರಣೆ । ಗಣ್ಯರು ಉಪಸ್ಥಿತಿ

ಕನ್ನಡಪ್ರಭ ವಾರ್ತೆ ಯಳಂದೂರುಇಡೀ ವಿಶ್ವವೇ ಬಸವಣ್ಣನವರ ತತ್ವಾದರ್ಶಗಳನ್ನು ಇಷ್ಟಪಡುತ್ತಿದ್ದು, ಇವರು ಸಾಂಸ್ಕೃತಿಕ ನಾಯಕರಾಗಿದ್ದಾರೆ. ಇವರ ಅದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.ಶನಿವಾರ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ, ಬಸವ ಜಯಂತಿ ಆಚರಣಾ ಸಮಿತಿ ಹಾಗೂ ಬಸವ ಬಳಗ ಒಕ್ಕೂಟಗಳ ವತಿಯಿಂದ ಹಮ್ಮಿಕೊಂಡಿದ್ದ ಬಸವ ಉತ್ಸವ ಕಾರ್ಯಕ್ರಮದಲ್ಲಿ ನಂದಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಬಸವಣ್ಣ ನಮ್ಮ ಹೆಮ್ಮೆಯಾಗಿದ್ದಾರೆ. ಬಸವ ಜಯಂತಿಯನ್ನು ವಿಶ್ವದ ಇತರೆ ರಾಷ್ಟ್ರಗಳಲ್ಲೂ ಆಚರಿಸುವ ವಾಡಿಕೆ ಹೆಚ್ಚಾಗುತ್ತಿದೆ. ನಮ್ಮ ರಾಜ್ಯದ ಪ್ರತಿ ಗ್ರಾಮಗಳಲ್ಲೂ ಜಯಂತಿ ಆಚರಣೆ ಮಾಡಲಾಗುತ್ತಿದೆ. 12ನೇ ಶತಮಾನದಲ್ಲಿ ಇವರು ನಡೆಸಿದ ಕ್ರಾಂತಿ, ಮಾನವ ಕುಲದ ಪರಿಕಲ್ಪನೆ, ಜಾತ್ಯತೀತ ನಿಲುವು ಎಲ್ಲರಿಗೂ ಆದರ್ಶವಾಗಿದೆ ಎಂದರು.ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿ, ಬಸವಣ್ಣ ಜಗತ್ತಿಗೆ ಮಾನವ ಧರ್ಮ ಏನೋ ಎಂಬುದನ್ನು ತೋರಿಸಿಕೊಟ್ಟ ಮಹಾನ್ ದಾರ್ಶನಿಕರಾಗಿದ್ದಾರೆ. ಮಹಾಮನೆಯ ಇವರ ಕಲ್ಪನೆಯೇ ಅತ್ಯಧ್ಭುವಾಗಿದೆ. ಎಲ್ಲರಿಗೂ ಅರ್ಥವಾಗುವಂತೆ ವಚನಗಳ ಮೂಲಕ ಹೇಳಿಕೊಟ್ಟ ಮಹಾನ್ ಸಂತರಾಗಿದ್ದಾರೆ. ಇವರ ತತ್ವಾದರ್ಶಗಳು ನಮಗೆ ಆದರ್ಶಪ್ರಾಯವಾಗಲಿ ಎಂದರು.ಗಮನ ಸೆಳೆದ ಮೆರವಣಿಗೆ:

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಂದಿಕಂಬಗಳಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕಪ್ಪು ಬಣ್ಣದ ಜಲ್ಲಿಕಟ್ಟು ಶನಿಕರ, ಅಲಂಕೃತ ಹಳ್ಳಿಕಾರ್‌ ಹೋರಿಗಳು, ಮಂಗಳವಾದ್ಯಗಳ ತಂಡ, ವೀರಗಾಸೆ ಕುಣಿತ, ಗೊರುಕನ ನೃತ್ಯತಂಡ, ಡೊಳ್ಳು ಕುಣಿತ, ಅಶ್ವಾರೂಢ ಬಸವೇಶ್ವರ ಪುತ್ಥಳಿ, ಬೆಳ್ಳಿ ರಥದಲ್ಲಿ ಸಾಗಿದ ಬಸವೇಶ್ವರರ ಭಾವಚಿತ್ರ, ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಜನಾ ತಂಡಗಳ ಸಮ್ಮುಖದಲ್ಲಿ ಮೆರವಣಿಗೆ ಕಣ್ಮನ ಸೆಳೆಯಿತು.

ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಎನ್. ಮಹೇಶ್, ಎಸ್. ಬಾಲರಾಜು, ಜೆಡಿಎಸ್‌ನ ಪುಟ್ಟಸ್ವಾಮಿ, ಕಾರಾಪುರ ವಿರಕ್ತ ಮಠದ ಬಸವರಾಜಸ್ವಾಮಿ ಒಡೆಯರ್‌, ಸಾಲೂರು, ಗೌಡಹಳ್ಳಿ, ಹರವೆ, ವಾಟಾಳು, ಮುಡಿಗುಂಡ, ಅಗರಕಲ್ಲು, ಮರಿಯಾಲ, ಗೌಡಹಳ್ಳಿ, ಕುದೇರು, ಹೊನ್ನೂರು ಮಾವಳ್ಳಿ, ಕೆಸ್ತೂರು ಮಠ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಕಾಡಾ ಅಧ್ಯಕ್ಷ ಮರಿಸ್ವಾಮಿ, ತೋಟೇಶ್, ವೀರಶೈವ ಮಹಾಸಭಾದ ಮೂಡ್ಲುಪುರ ನಂದೀಶ್, ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಗೌಡಹಳ್ಳಿ ರವಿ, ಬಸವ ಉತ್ಸವ ಸಮಿತಿ ಅಧ್ಯಕ್ಷ ಕೆಸ್ತೂರು ಪುಟ್ಟಸುಬ್ಬಪ್ಪ, ಉಪಾಧ್ಯಕ್ಷ ಶಿವಕುಮಾರ ಸ್ವಾಮಿ, ಕಾರ್ಯದರ್ಶಿ ಕೊಮರನಪುರ ಚಂದ್ರಶೇಖರ್‌, ಕೆಸ್ತೂರು ಮಹದೇವಸ್ವಾಮಿ, ಯುವ ಘಟಕದ ಅಧ್ಯಕ್ಷ ಮಲ್ಲಿಗೆಹಳ್ಳಿ ಸಂತೋಷ್ ಸೇರಿದಂತೆ ಅನೇಕರು ಇದ್ದರು.

---2507ವೈಎಲ್‌ಡಿಪಿ01ಯಳಂದೂರು ಪಟ್ಟಣದಲ್ಲಿ ಶನಿವಾರ ನಡೆದ ಬಸವ ಉತ್ಸವ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಎ.ಆರ್. ಕೃಷ್ಣಮೂರ್ತಿ ಸೇರಿ ಹಲವರಿದ್ದರು.2507ವೈಎಲ್‌ಡಿಪಿ02ಯಳಂದೂರು ಪಟ್ಟಣದಲ್ಲಿ ಶನಿವಾರ ನಡೆದ ಬಸವ ಉತ್ಸವ ಕಾರ್ಯಕ್ರಮದಲ್ಲಿ ಅಲಂಕೃತ ವಾಹನಗಳಲ್ಲಿ ಸಾಗಿದ ಬಸವೇಶ್ವರರ ಮೆರವಣಿಗೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್‌ ಪ್ರಕರಣ: ಹೊಸ ಫ್ಲೆಕ್ಸ್ ಮೂಲಕ ಬಿಜೆಪಿಗೆ ಕೈ ನಾಯಕರ ಕೌಂಟರ್‌
ಯುವ ಹೋರಾಟಕ್ಕೆ ಕಾಂಗ್ರೆಸ್‌ ರಾಜಕೀಯ ಬಣ್ಣ: ಸಂಸದ ಕಿಡಿ