ಬಸವೇಶ್ವರ, ಅಂಬೇಡ್ಕರ್, ಬಾಬೂಜಿ ಆದರ್ಶ ಪುರುಷರು

KannadaprabhaNewsNetwork |  
Published : May 18, 2025, 02:03 AM IST
ಬಸವೇಶ್ವರ, ಅಂಬೇಡ್ಕರ್, ಬಾಬೂಜಿ ಅವರು ಆದರ್ಶ ಪುರುಷರು : ಪಿ.ಮರಿಸ್ವಾಮಿ ಬಣ್ಣನೆ  | Kannada Prabha

ಸಾರಾಂಶ

ಚಾಮರಾಜನಗರದ ರೋಟರಿ ಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಶ್ರೀಬಸವೇಶ್ವರ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬುಜಗಜೀವನರಾಂ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಸವೇಶ್ವರರು, ಡಾ.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಆದರ್ಶ ಪುರುಷರು. ಈ ಮೂವರು ಮಹನೀಯರ ಕಲ್ಪನೆ ಒಂದೆ ಆಗಿತ್ತು ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ನಗರದ ರೋಟರಿ ಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ನಡೆದ ಶ್ರೀಬಸವೇಶ್ವರ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬುಜಗಜೀವನರಾಂ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವೇಶ್ವರರು, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬುಜಗಜೀವನರಾಂ ಸಮಸಮಾಜ ನಿರ್ಮಿಸಬೇಕೆಂಬುವುದು ಅವರ ಉದ್ದೇಶವಾಗಿತ್ತು. ಈ ಮೂವರ ಮಹನೀಯರು ಸಮಾಜದಲ್ಲಿ ತಾಂಡವಾಡುತ್ತಿದ್ದ ಆಸಮಾನತೆ, ಮೂಢನಂಬಿಕೆ. ಸಮಾಜದ ಅನಿಷ್ಟ ಪದ್ಧತಿ ವಿರೋಧಿಸಿ ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದರು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎನ್.ಮುನಿರಾಜು ಮುಖ್ಯಭಾಷಣಕಾರರಾಗಿ ಭಾಗವಹಿಸಿ ಮಾತನಾಡಿ, ಬಸವೇಶ್ವರರು, ಅಂಬೇಡ್ಕರ್‌ರರು, ಬಾಬುಜಗಜೀವನರಾಂ ಅವರು ಶೋಷಿತರ ಧ್ವನಿಯಾಗಿ ಕೆಲಸ ಮಾಡಿದರು. 12ನೇ ಶತಮಾನದ ವಚನಕಾರರ ಅಂಶಗಳು ಸಂವಿಧಾನದಲ್ಲಿ ಅಡಕವಾಗಿವೆ. ವಿದ್ಯಾರ್ಥಿಗಳು ವಚನಕಾರರನ್ನು ಓದಿದರೆ ಜೀವನ ಪವನ ಆಗುತ್ತದೆ ಎಂದರು. ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನಮ್ಮ ಸಂಘಟನೆಯು ನಾಡು, ನುಡಿಗಾಗಿ ಹೋರಾಟ ಮಾಡುವುದರ ಜೊತೆಗೆ ರಾಷ್ಟ್ರನಾಯಕರು, ಮಹನೀಯರ ಜಯಂತಿ ಆಚರಣೆ ಮಾಡುತ್ತದೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕೆಲಸ ಮಾಡುತ್ತಿದೆ ಎಂದರು. ನಗರಸಭಾ ಸದಸ್ಯೆ ಕುಮುದಾ ಕೇಶವಮೂರ್ತಿ, ರೋಟರಿ ಸಂಸ್ಥೆ ಅಧ್ಯಕ್ಷ ನಾಗರಾಜು ಮಾತನಾಡಿದರು.

ಸನ್ಮಾನ: ಸಿಮ್ಸ್ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಸ್.ನವೀನ್‌ಚಂದ್ರ, ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ತಜ್ಞರಾದ ಡಾ.ಎ.ಆರ್.ಬಾಬು, ಸಿಡಿಪಿಓ ಟಿ.ಎಂ.ಜಯಶೀಲ,ಮೈಸೂರು ಮಹಾತ್ಮ ಗಾಂಧಿ ಬಿ,ಎಡ್. ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಶಿವಕುಮಾ‌ರ್ ಅವರನ್ನು ಸನ್ಮಾನಿಸಲಾಯಿತು.ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾಸಭಾದ ಸಹ ಕಾರ್ಯದರ್ಶಿ ಪಣ್ಯದಹುಂಡಿರಾಜು, ನಿಜಧ್ವನಿಗೋವಿಂದರಾಜು, ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಅರುಣ್‌ ಕುಮಾರ್‌ಗೌಡ, ರವಿಚಂದ್ರಪ್ರಸಾದ್ ಕಹಳೆ, ಮುತ್ತಿಗೆ ಗೋವಿಂದರಾಜು, ರಾಚಪ್ಪ, ಲಿಂಗರಾಜು, ಮಹೇಶ್‌ಗೌಡ, ಸಿದ್ಧರಾಜು ಇತರರು ಹಾಜರಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?