ಬಸವೇಶ್ವರ, ಅಂಜನೇಯಸ್ವಾಮಿ ಜಾತ್ರಾ ಮಹೋತ್ಸವ

KannadaprabhaNewsNetwork |  
Published : May 09, 2024, 01:01 AM IST
ಪೋಟೋ 3 :  ಹೊನ್ನೇನಹಳ್ಳಿ ಗ್ರಾಮದಲ್ಲಿ ಬಸವ ಜಯಂತಿ ಜಾತ್ರಾ ಮಹೋತ್ಸವ ಪ್ರಯುಕ್ತ ಬಸವೇಶ್ವರ ಸ್ವಾಮಿ ಹಾಗೂ ಅಂಜನೇಯ ದೇವರುಗಳನ್ನು ಬೆಳ್ಳಿ ರಥದಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು. | Kannada Prabha

ಸಾರಾಂಶ

ದಾಬಸ್‌ಪೇಟೆ: ದೇವರು ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ ವಿಶೇಷ ಪೂಜೆ ಆಚರಣೆಗಳು ಮತ್ತು ಸಂಪ್ರದಾಯಗಳು ಜನರಲ್ಲಿ ಭಕ್ತಿ ಭಾವ ಮತ್ತು ಸ್ನೇಹ ಸೌಹಾರ್ದತೆ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಸವೇಶ್ವರ ದೇವಾಲಯ ಅರ್ಚಕ ನಾಗರಾಜು ತಿಳಿಸಿದರು.

ದಾಬಸ್‌ಪೇಟೆ: ದೇವರು ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ ವಿಶೇಷ ಪೂಜೆ ಆಚರಣೆಗಳು ಮತ್ತು ಸಂಪ್ರದಾಯಗಳು ಜನರಲ್ಲಿ ಭಕ್ತಿ ಭಾವ ಮತ್ತು ಸ್ನೇಹ ಸೌಹಾರ್ದತೆ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಸವೇಶ್ವರ ದೇವಾಲಯ ಅರ್ಚಕ ನಾಗರಾಜು ತಿಳಿಸಿದರು.

ಹೊನ್ನೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರ, ಅಂಜನೇಯ ಜಾಣ ಮಹೋತ್ಸವ ಹಾಗೂ ಮಹದೇಶ್ವರ ಪರಾವು, ಕರಗಲಮ್ಮ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಹಳ್ಳಿಯಲ್ಲಿಯೂ ದೇವಾಲಯಗಳ ನಿರ್ಮಾಣ, ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿರುವುದೇ ಜನರಲ್ಲಿ ಧಾರ್ಮಿಕ ನಂಬಿಕೆ ಇರುವುದಕ್ಕೆ ಸಾಕ್ಷಿ ಎಂದು ಹೇಳಿದರು.

ಅರ್ಚಕ ಜಯರಾಮು ಮಾತನಾಡಿ, ದೇವರ ಸೇವೆ ಮಾಡಿದರೆ ಒಂದು ಮನೆಯಷ್ಟೇ ಅಲ್ಲ, ಇಡೀ ಸಮಾಜಕ್ಕೆ ಒಳಿತಾಗುತ್ತದೆ. ದೇವಾಲಯ ಕಟ್ಟುವುದು ಗ್ರಾಮಸ್ಥರ ಸಂಕಲ್ಪ. ಸೇವೆ ಮಾಡಿಸಿಕೊಳ್ಳುವುದು ದೇವರ ಕರ್ತವ್ಯ, ಪ್ರತಿಫಲ ನೀಡುವುದು ದೇವರಿಗೆ ಬಿಟ್ಟದ್ದು ಎಂದರು.

ಜಾತ್ರಾ ಮಹೋತ್ಸವ ಪ್ರಯುಕ್ತ ಬಸವೇಶ್ವರ ಸ್ವಾಮಿಗೆ ಅಕ್ಕಿಪೂಜೆ ಏರ್ಪಡಿಸಲಾಗಿತ್ತು. ನಂತರ ಬಸವೇಶ್ವರ ಸ್ವಾಮಿಗೆ ಹಾಗೂ ಅಂಜನೇಯ ದೇವರ ಗ್ರಾಮದಲ್ಲೆಡೆ ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಯಿತು.

ಪ್ರಸಾದ ವ್ಯವಸ್ಥೆ: ಬಸವೇಶ್ವರ ಜಯಂತಿ ಪ್ರಯುಕ್ತ ಬಸವೇಶ್ವರ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 7 ಗಂಟೆಯಿಂದ ತಿಂಡಿ ವ್ಯವಸ್ಥೆ ಹಾಗೂ ಮಧ್ಯಾಹ್ನ 12 ಗಂಟೆಗೆ ಊಟದ ವ್ಯವಸ್ಥೆ ಮಾಡಿದ್ದರು. ಪೋಟೋ 3 : ಹೊನ್ನೇನಹಳ್ಳಿ ಗ್ರಾಮದಲ್ಲಿ ಬಸವ ಜಯಂತಿ ಜಾತ್ರಾ ಮಹೋತ್ಸವ ಪ್ರಯುಕ್ತ ಬಸವೇಶ್ವರ ಸ್ವಾಮಿ ಹಾಗೂ ಅಂಜನೇಯ ದೇವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!