ಕನ್ನಡಪ್ರಭ ವಾರ್ತೆ ಸುರಪುರ
ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಶನಿವಾರ 31ನೇ ವಾರ್ಷಿಕ ಮಹಾಸಭೆ ಅಂಗವಾಗಿ ಹಮ್ಮಿಕೊಂಡಿದ್ದ ನೂತನ ಬಸವ ಸಹಕಾರ ಭವನ ಅಡಿಗಲ್ಲು ಸಮಾರಂಭ, ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರಿಗೆ ಇ-ಸ್ಟಾಂಪಿಂಗ್, ಸೇಫ್ ಡೆಪಾಸಿಟ್ ಲಾಕರ್, ಸಂಪೂರ್ಣ ಗಣಕೀಕೃತ ವ್ಯವಸ್ಥೆ, ಕೋರ್ ಬ್ಯಾಂಕಿಂಗ್, ವಾಹನ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿರುವುದು ಸಂಸ್ಥೆಯ ಪ್ರಗತಿಗೆ ಸಾಕ್ಷಿಯಾಗಿದೆ. ‘ನನಗಾಗಿ ಅಲ್ಲ, ಸಂಸ್ಥೆಗಾಗಿ’ ಎಂಬ ಉದ್ದೇಶದಿಂದ ಹಲವು ಸವಾಲುಗಳ ನಡುವೆಯೂ ಸಂಘವನ್ನು ಕಟ್ಟಿಬೆಳೆಸಿದ ಆಡಳಿತ ಮಂಡಳಿ ಹಾಗೂ ಹಿರಿಯ ಮುಖಂಡರ ಸೇವೆ ಶ್ಲಾಘನೀಯ ಎಂದರು. ಅಪೆಕ್ಸ ಬ್ಯಾಂಕ್ ಹಾಗೂ ಆರ್ಥಿಕ ನೆರವಿನ ಕುರಿತು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ, ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ಸಾಧ್ಯವಾದಷ್ಟು ಆರ್ಥಿಕ ನೆರವು ಹಾಗೂ ಅಗತ್ಯ ಸಹಕಾರ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಕೆವೈಡಿಸಿಸಿ ಬ್ಯಾಂಕ್ನ ನಿರ್ದೇಶಕ ಸುರೇಶ ಆರ್. ಸಜ್ಜನ ಮಾತನಾಡಿ, ರಾಜಕೀಯವಾಗಿ ಬೇರೆ ಬೇರೆ ಪಕ್ಷಗಳಲ್ಲಿದ್ದರೂ, ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಭೇದ ಮರೆತು ಶಾಂತಿ ಮತ್ತು ಸೌಹಾರ್ದತೆಯಿಂದ ಸಂಘಟಿತರಾಗಿ ಕೆಲಸ ಮಾಡಿ ಬೆಳೆಯಬೇಕು. ಬ್ಯಾಂಕ್ನ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿ ರೈತರು ಹಾಗೂ ಸಹಕಾರ ಸಂಘಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಶ್ರಮಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕಿನ ನಿರ್ದೇಶಕ ಶಿವಾನಂದ ಮಾನಕರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು ನಿರ್ದೇಶಕರು ವಿಶ್ವನಾಥರೆಡ್ಡಿ ದರ್ಶನಾಪುರ, ಡಿವೈಸಿಸಿ ಬ್ಯಾಂಕ್ನ ನಿರ್ದೇಶಕ ಬಸವರಾಜ ಪಾಟೀಲ ಚಿಂಚೋಳಿ ಮತ್ತು ಸುರೇಶ ಆರ್. ಸಜ್ಜನ ಕರ್ನಾಟಕ ರಾಜ್ಯ ಮಹಿಳೆ ಸಹಕಾರ ಮಹಾಮಂಡಳಿಯ ನಿರ್ದೇಶಕಿ ಚೆನ್ನಮ್ಮ ಪ್ರಕಾಶ ಅಂಗಡಿ ಕನ್ನೆಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸ್ಮರಿಸಿ ಅಭಿನಂದಿಸಲಾಯಿತು.
ಬಸವರಾಜ ಜಮದ್ರಖಾನಿ, ಮಲ್ಲಣ್ಣ ಸಾಹುಕಾರ ಮುಧೋಳ್, ಪ್ರಕಾಶ ಬಣಗಾರ, ಶಿವರಾಜ ಹೊನ್ನಳ್ಳಿ ಸೇರಿದಂತೆ ಹಿರಿಯ ಮುಖಂಡರು, ಶೇರುದಾರರು, ಸಂಘದ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು. ಚನ್ನಮಲ್ಲಿಕಾರ್ಜುನ ಪ್ರಾರ್ಥಿಸಿದರು. ಮಂಜುನಾಥ ಜಾಲಹಳ್ಳಿ ಸ್ವಾಗತಿಸಿದರು. ಡಿ.ಸಿ.ಪಾಟೀಲ ನಿರೂಪಿಸಿ, ವಂದಿಸಿದರು.