ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಜಾಗತಿಕ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಲಿಂಗಾಯತ ಸಂಘಟನೆ ಈರಣ್ಣ ದೇಯನ್ನವರ, ರಾಷ್ಟ್ರೀಯ ಬಸವ ದಳದ ಅಶೋಕ ಬೆಂಡಿಗೇರಿ, ಚಂದ್ರಶೇಖರ ಬೆಂಬಳಗಿ, ಶಂಕರ ಗುಡಸ, ಎಂ.ಬಿ.ಜೀರಲಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಜಾಗತಿಕ ಲಿಂಗಾಯತ ಮಹಾಸಭೆ, ಲಿಂಗಾಯತ ಸಂಘಟನೆ, ರಾಷ್ಟ್ರೀಯ ಬಸವದಳ, ಲಿಂಗಾಯತ ಮಹಿಳಾ ಸಮಾಜ, ಲಿಂಗಾಯತ ಸೇವಾ ಸಮಿತಿ, ಬಸವ ಕಾಯಕಜೀವಿಗಳ ಸಂಘ, ಬಸವೇಶ್ವರ ಯುವಕ ಸಂಘ, ಮಹಾಂತೇಶ ನಗರದ ಲಿಂಗಾಯತ ಧರ್ಮ ಮಹಾಸಭಾ, ಸಹ್ಯಾದ್ರಿನಗರದ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ, ಲಿಂಗಾಯತ ಬಿಜ್ನಿಸ್ ಪೋರಂ, ಶಾಹಾಪೂರದ ದಾನಮ್ಮದೇವಿ ಮಂದಿರ ಮತ್ತು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಈ ಮೊದಲಾದ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದವು. ಡಾ.ಪ್ರಭಾಕರ ಕೋರೆಯವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಸಾವಿರಾರು ಬೈಕ್ ಸವಾರರು ಬಸವಣ್ಣನವರ ಷಟ್ಸಸ್ಥಲ ಧ್ವಜದೊಂದಿಗೆ ಬೆಳಗಾವಿ ಪ್ರಮುಖ ಬೀದಿಗಳಾದ ಆರ್ಪಿಡಿ ಸರ್ಕಲ್, ಬಿಗ್ ಬಜಾರ್, ಅನಗೋಳ ಮುಖ್ಯ ರಸ್ತೆ, ವಡಗಾಂವ ಮುಖ್ಯ ರಸ್ತೆ, ನಾಥ್ ಪೈ ಸರ್ಕಲ್ ಶಹಾಪುರ, ಖಾಡೆ ಬಜಾರ್, ಶಿವಾಜಿ ಗಾರ್ಡನ್ ಕಪಿಲೇಶ್ವರ್ ಮಾರ್ಗ, ರಾಮದೇವ್ ಗಲ್ಲಿ, ಸಾಮಾದೇವಿ ಗಲ್ಲಿ, ಕಾಲೇಜ್ ರಸ್ತೆ, ಚೆನ್ನಮ್ಮ ವೃತ್ತ, ಆರ್.ಎನ್.ಶೆಟ್ಟಿ, ನಾಗನೂರು ಮಠ, ಲಿಂಗಾಯತ ಭವನ, ಶ್ರೀನಗರ ಉದ್ಯಾನ, ಮಹಾಂತೇಶ್ ನಗರ, ಹರ್ಷಾ ಹೋಟೆಲ್ ಮೂಲಕ ರಾಮತೀರ್ಥ ನಗರದಲ್ಲಿ ಕೊನೆಗೊಳಿಸಿದರು.