ಬಳ್ಳಾರಿ: ಕರ್ನಾಟಕ ಬಯಲಾಟ ಅಕಾಡೆಮಿಯು 2023-24, 2024-25ನೇ ಸಾಲಿನ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು, ಜಿಲ್ಲೆಯ ಇಬ್ಬರು ಹಿರಿಯ ಬಯಲಾಟ ಕಲಾವಿದರು ಗೌರವ ಪ್ರಶಸ್ತಿಗೆ ಹಾಗೂ ಓರ್ವರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.
ಕಪ್ಪಗಲ್ ಓಂಕಾರಮ್ಮ:
ಬಳ್ಳಾರಿ ತಾಲೂಕಿನ ಕಪ್ಪಗಲ್ ಗ್ರಾಮದ ಓಂಕಾರಮ್ಮ ಬಯಲಾಟ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದವರು. 18ನೇ ವಯಸ್ಸಿನಲ್ಲಿ ರಂಗಪ್ರವೇಶ ಪಡೆದು, ಕರ್ನಾಟಕ, ಆಂಧ್ರಪ್ರದೇಶದಲ್ಲಿ 1500ಕ್ಕೂ ಹೆಚ್ಚು ಬಯಲಾಟಗಳಿಗೆ ಸ್ತ್ರೀಪಾತ್ರಧಾರಿಯಾಗಿ ಅಭಿನಯಿಸಿದ್ದಾರೆ. ಅಭಿಮನ್ಯುಕಾಳಗ, ಸುಂದೋಪ ಸುಂದರ, ರಾಮಾಯಣ, ಗಿರಿಜಾಕಲ್ಯಾಣ ಸೇರಿದಂತೆ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವತುಂಬಿದ್ದಾರೆ.ಪಂಪಯ್ಯಸ್ವಾಮಿ:
ಕೆ.ಹೊನ್ನೂರುಸ್ವಾಮಿ:
ಬಳ್ಳಾರಿಯ ಕೆ.ಹೊನ್ನೂರಸ್ವಾಮಿ ಅಳಿವಿನಂಚಿನಲ್ಲಿರುವ ತೊಗಲುಗೊಂಬೆ ಕಲಾ ಪ್ರಕಾರವನ್ನು ಜೀವಂತವಾಗಿರಿಸಲು ಸಾಕಷ್ಟು ಶ್ರಮಿಸಿದ್ದಾರೆ. 2009-10ರಲ್ಲಿ ಶ್ರೀಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡವನ್ನು ಕಟ್ಟಿ ರಾಜ್ಯದ ನಾನಾ ಕಡೆ ಪ್ರದರ್ಶನ ನೀಡಿದ್ದಾರೆ. ರಾಮಾಯಣ, ಮಹಾಭಾರತದ ಮಹಾಕಾವ್ಯಗಳಲ್ಲಿನ ಪಾತ್ರಗಳಿಗೆ ತೊಗಲುಗೊಂಬೆ ಮೂಲಕ ಜೀವದ ತುಂಬಿರುವ ಹೊನ್ನೂರಸ್ವಾಮಿ ಸಾಮಾಜಿಕ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿಶಿಷ್ಟವಾದ ತೊಗಲುಗೊಂಬೆ ಕಲೆಯನ್ನು ಬಳಸಿಕೊಂಡು ಸೈ ಎನಿಸಿಕೊಂಡಿದ್ದಾರೆ.