ಪಾಲಿಕೆ ₹1,700 ಕೋಟಿ ಯೋಜನೆಗಳಿಗೆ ಒಪ್ಪಿಗೆ

KannadaprabhaNewsNetwork |  
Published : Feb 02, 2024, 01:01 AM IST
ಫೋಟೋ | Kannada Prabha

ಸಾರಾಂಶ

ಬೆಂಗಳೂರು ಪ್ರಮುಖ ರಸ್ತೆಗಳನ್ನು ವೈಟ್‌ಟಾಪಿಂಗ್‌ ರಸ್ತೆಗಳಾಗಿ ಅಭಿವೃದ್ಧಿಪಡಿಸಲು ₹800 ಕೋಟಿ ಸೇರಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಘಟನೋತ್ತರ ಅನುಮೋದನೆ ಹಾಗೂ ಇತರೆ ಕಾಮಗಾರಿಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್‌ಟಾಪಿಂಗ್‌ ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ₹1,200 ಕೋಟಿ ವೆಚ್ಚಕ್ಕೆ ಘಟನೋತ್ತರ ಅನುಮೋದನೆ ಹಾಗೂ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ₹263 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ₹1,700 ಕೋಟಿ ಮೊತ್ತದ ಕಾಮಗಾರಿಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ನೀಡಲಾಗಿದೆ.

ಬೆಂಗಳೂರು ಪ್ರಮುಖ ರಸ್ತೆಗಳನ್ನು ವೈಟ್‌ ಟಾಪಿಂಗ್‌ ರಸ್ತೆಗಳಾಗಿ ಅಭಿವೃದ್ಧಿಪಡಿಸಲು ₹800 ಕೋಟಿ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿಗೆ ₹1,200 ಕೋಟಿಗಳ ಕ್ರಿಯಾಯೋಜನೆಗೆ 2024ರ ಜ.12ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಬೈಯಪ್ಪನಹಳ್ಳಿ ಬಳಿ ಮೇಲ್ಸೇತುವೆ:

ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಸಂಪರ್ಕಿಸಲು ಸೂಕ್ತ ರಸ್ತೆ, ಬಸ್ಸು, ಮೆಟ್ರೋ ವ್ಯವಸ್ಥೆ ಇಲ್ಲದೆ ಸಾವಿರಾರು ಮಂದಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಹೀಗಾಗಿ ಟರ್ಮಿನಲ್‌ ಸಂಪರ್ಕಿಸಲು ಐಒಸಿ ಜಂಕ್ಷನ್‌ ಬಳಿ ₹263 ಕೋಟಿ ವೆಚ್ಚದಲ್ಲಿ 1.5 ಕಿ.ಮೀ. ಉದ್ದದ ರೋಟರಿ ಮೇಲ್ಸೇತುವೆ ನಿರ್ಮಾಣ ಹಾಗೂ ಬೈಯಪ್ಪನಹಳ್ಳಿ ಲೆವೆಲ್‌ ಕ್ರಾಸಿಂಗ್‌ ಬಳಿ ಎರಡು ಹೆಚ್ಚುವರಿ ಪಥಗಳ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.₹210 ಕೋಟಿಯಲ್ಲಿ ಕುಡಿಯುವ ನೀರು:

ಬಿಬಿಎಂಪಿ ವ್ಯಾಪ್ತಿಗೆ ನೂತನವಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಪೈಕಿ ಮೊದಲ ಹಂತದಲ್ಲಿ ಕೈಬಿಟ್ಟಿರುವ ಹಳ್ಳಿಗಳಿಗೆ ಎರಡನೇ ಹಂತದಲ್ಲಿ ₹210 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಜತೆಗೆ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬೃಹತ್‌ ಮಳೆ ನೀರುಗಾಲುವೆಗಳ ಪುನರ್‌ ನಿರ್ಮಾಣ ಹಾಗೂ ಇತರೆ ಅಭಿವೃದ್ಧಿಗೆ ₹30 ಕೋಟಿ ಒದಗಿಸಲಾಗಿದೆ.

PREV

Recommended Stories

ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು