ವಿಶ್ವನಾಥ ಮಲೇಬೆನ್ನೂರು
ನೀವು ಬೆಂಗಳೂರಿನಲ್ಲಿ ವಾಣಿಜ್ಯ ಕಟ್ಟಡ ಹೊಂದಿದ್ದೀರಾ? ಅದಕ್ಕೆ ದೊಡ್ಡ ಪ್ರಮಾಣದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಿದ್ದರೆ ಸೋಮವಾರದಿಂದ ನಿಮ್ಮ ಮನೆಗೆ ಬಿಬಿಎಂಪಿ ಅಧಿಕಾರಿಗಳು ಬಂದು ಕಾರು, ಚಿನ್ನ ಇತ್ಯಾದಿಗಳನ್ನು ಜಪ್ತಿ ಮಾಡಲಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ತೆರಿಗೆ ಬಾಕಿ ಉಳಿಸಿಕೊಂಡ ವಾಣಿಜ್ಯ ಕಟ್ಟಡಗಳ ಆಸ್ತಿ ಮಾಲಿಕರ ಕಾರು ಸೇರಿದಂತೆ ಚರಾಸ್ತಿ ಜಪ್ತಿ ಮಾಡಿ ಹರಾಜು ಹಾಕಲು ಬಿಬಿಎಂಪಿ ಕಾರ್ಯಯೋಜನೆ ರೂಪಿಸಿದ್ದು, ಡಿ.18 (ಸೋಮವಾರ) ಜಪ್ತಿ ಆರಂಭವಾಗಲಿದೆ ಎಂದು ಬಿಬಿಎಂಪಿ ಉನ್ನತ ಮೂಲಗಳು ತಿಳಿಸಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 20 ಲಕ್ಷಕ್ಕೂ ಅಧಿಕ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಒಳಪಟ್ಟಿವೆ. ಸಾಕಷ್ಟು ಪ್ರಮಾಣ ವಸತಿ ಮತ್ತು ವಾಣಿಜ್ಯ ವ್ಯಾಪಾರ ನಡೆಸುವ ಆಸ್ತಿಗಳಿದ್ದರೂ ವಾರ್ಷಿಕವಾಗಿ ಆಸ್ತಿ ತೆರಿಗೆ ಮೂಲಕ ಸಂಗ್ರಹ ಆಗುತ್ತಿರುವ ಮೊತ್ತ ನಾಲ್ಕು ಸಾವಿರ ಕೋಟಿ ರುಪಾಯಿ ದಾಟುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ಪ್ರಮಾಣ ಹೆಚ್ಚಳ ಮಾಡುವ ಸ್ಥಿತಿಯಲ್ಲಿಯೂ ಇಲ್ಲ. ಆದರೆ, ವರ್ಷದಿಂದ ವರ್ಷಕ್ಕೆ ನಗರದ ಜನರಿಗೆ ಒದಗಿಸಬೇಕಾದ ಮೂಲಸೌಕರ್ಯದ ವೆಚ್ಚ ಮಾತ್ರ ಹೆಚ್ಚಾಗುತ್ತಿದೆ. ಹೀಗಾಗಿ, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಂದ ಬಾಕಿ ವಸೂಲಿಗೆ ಬಿಬಿಎಂಪಿ ಕಂದಾಯ ವಿಭಾಗ ಇದೀಗ ಮುಂದಾಗಿದೆ.
₹500 ಕೋಟಿಗೂ ಹೆಚ್ಚು ಬಾಕಿ:
ಜಪ್ತಿ ಮಾಡಿದ ವಸ್ತುಗಳು ಹರಾಜು
ವಾಣಿಜ್ಯ ಕಟ್ಟಡ ಸೀಜ್ ಶುರು
---------ಬ್ಯಾಂಕ್ ಖಾತೆ
ನಗರದಲ್ಲಿ ಭಾರೀ ಪ್ರಮಾಣದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಬ್ಯಾಂಕ್ ಖಾತೆ ಸೀಜ್ ಮಾಡುವುದು ಹಾಗೂ ಬಾಕಿದಾರರ ಬ್ಯಾಂಕ್ ಖಾತೆಯನ್ನು ಬಿಬಿಎಂಪಿಯ ಬ್ಯಾಂಕ್ ಖಾತೆಯೊಂದಿಗೆ ಜೋಡೆಣೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಪ್ರಕ್ರಿಯೆಯಿಂದ ಒಂದೇ ಒಂದು ರೂಪಾಯಿಯೂ ಬಿಬಿಎಂಪಿಯ ಕಂದಾಯ ವಿಭಾಗ ವಸೂಲಿ ಮಾಡಿಲ್ಲ.ಸ್ಥಿರಾಸ್ತಿ ಕೂಡ ಜಪ್ತಿ ಮಾಡಲು ಅವಕಾಶಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಚಿರಾಸ್ತಿ ಹಾಗೂ ಸ್ಥಿರಾಸ್ತಿ ಎರಡನ್ನೂ ಜಪ್ತಿ ಮಾಡುವುದಕ್ಕೆ ಬಿಬಿಎಂಪಿಯ ಕಾಯ್ದೆಯಲ್ಲಿ ಅವಕಾಶವಿದೆ. ಆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ.-ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ, ಬಿಬಿಎಂಪಿ------ಬಿಡಿಸಿಕೊಳ್ಳದಿದ್ದರೆ ಹರಾಜುಜಪ್ತಿ ಮಾಡಿದ ಚರಾಸ್ತಿ ಬಿಡಿಸಿಕೊಳ್ಳಲು ಎರಡು ವಾರ ಅವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ಬಾಕಿ ತೆರಿಗೆ ಪಾವತಿಸಿ ಆಸ್ತಿ ಬಿಡಿಸಿಕೊಳ್ಳದಿದ್ದರೆ ಅದನ್ನು ಹರಾಜು ಮಾಡಲಾಗುತ್ತದೆ.