ಬಿ.ಸಿ.ರೋಡ್‌: ಮೈಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಕಲಾವೈಭವ

KannadaprabhaNewsNetwork |  
Published : Apr 27, 2025, 01:46 AM IST
ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವ‌ದಲ್ಲಿ ಸಾದಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಮಂಗಳೂರು ಹಾಗೂ ಬಿ.ಸಿ. ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವವು ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸಮಾರಂಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಅವರಿಗೆ ಗೌರವ ಸನ್ಮಾನ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮಂಗಳೂರು ಹಾಗೂ ಬಿ.ಸಿ. ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವವು ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸಮಾರಂಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಅವರಿಗೆ ಗೌರವ ಸನ್ಮಾನ ನೀಡಲಾಯಿತು.

ರಂಗಕರ್ಮಿ-ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಮಾತನಾಡಿ, ಮಕ್ಕಳನ್ನು ಬಾಲ್ಯದಲ್ಲಿಯೇ ಸಾಂಸ್ಕೃತಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮುಂದೆ ಅವರು ಆ ಕ್ಷೇತ್ರದಲ್ಲಿ ಸಾಧನೆ ಮಾಡುವ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುತ್ತಾರೆ ಎಂದರು.

ಪುತ್ತೂರಿನ ಬಿಲ್ಡರ್ ಅಬ್ದುಲ್ ರೆಹಮಾನ್ ಮಾತನಾಡಿ, ವಿದ್ಯಾರ್ಥಿಗಳು ಒಂದೇ ತಾಯಿಯ ಮಕ್ಕಳ ರೀತಿ ಕಲಿತು ತಮ್ಮ ಸಾಧನೆಯ ಮೂಲಕ ವಿದ್ಯಾಸಂಸ್ಥೆ, ಹೆತ್ತವರಿಗೆ ಕೀರ್ತಿ ತರುವ ಜತೆಗೆ ದೇಶದ ಆಸ್ತಿಯಾಗಬೇಕಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ರಾಕೇಶ್‌ಕುಮಾರ್ ಮಾತನಾಡಿ, ಮೈಟ್ ಕಾಲೇಜು ೨೦೦೧ರಲ್ಲಿ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಆರಂಭಗೊಂಡಿದ್ದು, ಬಳಿಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ೨೦೦೫ರಲ್ಲಿ ಬಿ.ಸಿ.ರೋಡಿಗೂ ಕಾಲೇಜು ವಿಸ್ತರಣೆಗೊಂಡಿದೆ. ವೃತ್ತಿಪರ ಕೋರ್ಸ್‌ಗಳನ್ನು ಬೋಧಿಸುತ್ತಿರುವ ಕಾಲೇಜು ಮುಂಬೈನ ಐಟಿಎಸಿ ಹಾಗೂ ತಿರುವನಂತಪುರದ ಬಿಎಸ್‌ಎಸ್ ಬೋರ್ಡ್‌ನ ಅಧೀನಕ್ಕೆ ಒಳಪಟ್ಟು ಕಾರ್ಯಾಚರಿಸುತ್ತಿದೆ. ಮುಂದೆ ಬಿ.ಸಿ. ರೋಡಿನಲ್ಲಿ ಸ್ವಂತ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು.

ವೇದಿಕೆಯಲ್ಲಿ ರಂಗನಟ ಪ್ರಿತೇಶ್‌ ಕುಮಾರ್, ಉಪಪ್ರಾಂಶುಪಾಲೆ ನಿಶ್ಮಿತಾ ರಾಕೇಶ್, ವಿಭಾಗ ಮುಖ್ಯಸ್ಥ ಮೊಹಮ್ಮದ್ ಆಶ್ರಫ್, ಐಶ್ವರ್ಯ ಪ್ರಸಾದ್, ವಿದ್ಯಾರ್ಥಿ ನಾಯಕರಾದ ಮಿಥುನ್, ಸಾಂಸ್ಕೃತಿಕ ಕಾರ್ಯದರ್ಶಿ ಬಾಯಿಝ್ ಉಪಸ್ಥಿತರಿದ್ದರು.

ಉಪನ್ಯಾಸಕಿಯರಾದ ನಿಶ್ಮಿತಾ ಸ್ವಾಗತಿಸಿದರು. ಗೀತಾ ವಂದಿಸಿದರು. ಚೇತನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ