ಕಾಲೇಜು ವಸತಿ ನಿಲಯಕ್ಕೆ ಬಿಸಿಎಂ ಜಿಲ್ಲಾ ಅಧಿಕಾರಿ ಭೇಟಿ

KannadaprabhaNewsNetwork |  
Published : Jul 17, 2024, 12:51 AM IST
ಚಿತ್ತಾಪುರ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಬಾಲಕಿಯರ ಕಾಲೇಜು ವಸತಿ ನಿಲಯಕ್ಕೆ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಪ್ರಭು ದೊರೆ ಭೆಟ್ಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸುತ್ತಿರುವದು. | Kannada Prabha

ಸಾರಾಂಶ

ಬಿಸಿಎಂ ಬಾಲಕಿಯರ ಕಾಲೇಜು ವಸತಿ ನಿಲಯದ ವಿದ್ಯಾರ್ಥಿನಿಯರು ವಾರ್ಡನ್ ಅನಿತಾ ಬಜಂತ್ರಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಲಾಡ್ಜಿಂಗ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಹಿನ್ನಲೆಯಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಪ್ರಭು ದೊರೆ ವಸತಿ ನಿಲಯಕ್ಕೆ ಭೆಟ್ಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಪಟ್ಟಣದ ಬಿಸಿಎಂ ಬಾಲಕಿಯರ ಕಾಲೇಜು ವಸತಿ ನಿಲಯದ ವಿದ್ಯಾರ್ಥಿನಿಯರು ವಾರ್ಡನ್ ಅನಿತಾ ಬಜಂತ್ರಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಲಾಡ್ಜಿಂಗ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಹಿನ್ನಲೆಯಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಪ್ರಭು ದೊರೆ ವಸತಿ ನಿಲಯಕ್ಕೆ ಭೆಟ್ಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.

ಶುಕ್ರವಾರ ಬೆಳ್ಳಂಬೆಳಗೆ ಕಾಲೇಜು ವಿದ್ಯಾರ್ಥಿನಿಯರು ವಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರಿಯಾಂಕಾ ಅವರನ್ನು ಧಿಡೀರ್ ಅಂತಾ ವರ್ಗಾವಣೆ ಮಾಡಿ ಹೊಸದಾಗಿ ವಾರ್ಡನ್‌ಆಗಿ ವರ್ಗಾವಣೆಗೊಂಡ ಅನಿತಾ ಬಜಂತ್ರಿ ಅವರನ್ನು ನೇಮಿಸಿರುವದನ್ನು ವಿರೋಧಿಸಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನೆ ಮಾಡಿದ್ದರು ಇದನ್ನು ಕನ್ನಡಪ್ರಭದಲ್ಲಿ ವರದಿ ಪ್ರಕಟಗೊಂಡಿದ್ದರ ಹಿನ್ನಲೆಯಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಪ್ರಭು ದೊರೆ ವಸತಿ ನಿಲಯಕ್ಕೆ ಭೆಟ್ಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡಿ ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ವಾರ್ಡನ್ ಆಗಿ ನಿಯುಕ್ತಿಗೊಂಡಿದ್ದ ಅನಿತಾ ಬಜಂತ್ರಿ ಅವರನ್ನು ಬಿಸಿಎಂ ಮೆಟ್ರೀಕ್ ಪೂರ್ವ ವಸತಿ ನಿಲಯಕ್ಕೆ ನಿಯೊಜನೆಯನ್ನು ಮಾಡಿ ತಾಲೂಕು ವಿಸ್ತಿರ್ಣಾಧಿಕಾರಿ ಸುನಿತಾ ಅವರನ್ನು ತಾತ್ಕಾಲಿಕವಾಗಿ ಕಾಲೇಜು ವಸತಿ ನಿಲಯಕ್ಕೆ ನಿಯೊಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!