ಮಹಾತ್ಮರ ತತ್ವ ಪಾಲನೆಯ ಆತ್ಮವಿಮರ್ಶೆಯಾಗಲಿ: ಶಾಸಕ ಭೀಮಣ್ಣ ನಾಯ್ಕ

KannadaprabhaNewsNetwork |  
Published : Oct 03, 2024, 01:17 AM IST
೨ಎಸ್.ಆರ್.ಎಸ್೪ಪೊಟೋ೧ ( ಬಿಡ್ಕಿಬೈಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಶಾಸಕ ಭೀಮಣ್ಣ ನಾಯ್ಕ ಮಾಲಾರ್ಪಣೆ ಮಾಡಿದರು.)೨ಎಸ್.ಆರ್.ಎಸ್೪ಪೊಟೋ೨ ( ಕಾಲ್ನಡಿಗೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಸಂಚರಿಸಿದರು.) | Kannada Prabha

ಸಾರಾಂಶ

ಮಹಾತ್ಮ ಗಾಂಧೀಜಿ ಅವರ ಆದರ್ಶ ಎಷ್ಟು ಪಾಲಿಸಿದ್ದೇವೆ ಎಂದು ನಾವೇ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಕಂಡ ಕನಸು ಎಲ್ಲ ವರ್ಗದವರ ಜತೆಯಲ್ಲಿ ಒಂದಾಗಿ ಕೆಲಸ ಮಾಡಬೇಕು.

ಶಿರಸಿ: ಮನಸ್ಸಿನೊಳಗಿನ ಕೊಳೆ ತೊಳೆದು ಎಲ್ಲರೂ ಭಾರತೀಯರು ಎಂದು ಕೆಲಸ ಮಾಡಬೇಕು. ಅಭಿವೃದ್ಧಿಗೆ ಬದ್ಧರಾಗಿರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಬುಧವಾರ ನಗರದ ಬಿಡಕಿಬೈಲಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಾತ್ಮ ಗಾಂಧೀಜಿ ಅವರ ಆದರ್ಶ ಎಷ್ಟು ಪಾಲಿಸಿದ್ದೇವೆ ಎಂದು ನಾವೇ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರು ಕಂಡ ಕನಸು ಎಲ್ಲ ವರ್ಗದವರ ಜತೆಯಲ್ಲಿ ಒಂದಾಗಿ ಕೆಲಸ ಮಾಡಬೇಕು. ಪ್ರೀತಿ, ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಮನಸ್ಸಿನ ಕಲ್ಮಶ ಮೊದಲು ತೆಗೆಯಬೇಕು ಎಂದ ಅವರು, ಸ್ವಚ್ಛತೆ ನಿತ್ಯದ ಕಾರ್ಯ ಆಗಬೇಕಿದೆ ಎಂದರು.ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಮಾತನಾಡಿ, ಪ್ರತಿಯೊಬ್ಬರೂ ಪ್ರತಿ ಮನೆಯಲ್ಲೂ, ಮನೆ ಸುತ್ತಲಿನ ಪರಿಸರದಲ್ಲೂ ಸ್ವಚ್ಛತಾ ಕಾರ್ಯ ಮಾಡಿದರೆ ಇಡೀ ದೇಶ ಸ್ವಚ್ಛವಾಗುತ್ತದೆ ಎಂದರು.ನಿವೃತ್ತ ಪ್ರಾಚಾರ್ಯ ಕೆ.ಎನ್. ಹೊಸ್ಮನಿ ಮಾತನಾಡಿ, ಗಾಂಧೀಜಿ ಅವರ ಜೀವನವೇ ಆದರ್ಶ. ಅದನ್ನು ಎಲ್ಲರೂ ಪಾಲಿಸಬೇಕು ಎಂದರು.ಈ ವೇಳೆ ಡಿಎಸ್ಪಿ ಗಣೇಶ ಕೆ.ಎಲ್., ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್ಟ, ಪೌರಾಯುಕ್ತ ಕಾಂತರಾಜು, ಪ್ರಮುಖರಾದ ವೆಂಕಟೇಶ ಹೊಸಬಾಳೆ, ಭಾರತ ಸೇವಾ ದಳದ ಅಧ್ಯಕ್ಷ ವಿ.ಎಸ್. ನಾಯ್ಕ, ಆರ್.ಎಂ. ವೆರ್ಣೇಕರ್ ಸೇರಿದಂತೆ ಮತ್ತಿತರರು ಇದ್ದರು.ಬಿಡ್ಕಿಬೈಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಾಸಕ ಭೀಮಣ್ಣ ನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ ನೇತೃತ್ವದಲ್ಲಿ ಹಳೆ ಬಸ್ ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ(ಗಾಂಧಿ ನಡಿಗೆ) ಶಿವಾಜಿ ಚೌಕ, ಸಿಪಿ ಬಜಾರ್, ದೇವಿಕೆರೆ, ಅಶ್ವಿನಿ ಸರ್ಕಲ್ ಮೂಲಕ ಇಂದಿರಾ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಆಗಮಿಸಿ, ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ ಶಾಸ್ತ್ರೀ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾಲ್ನಡಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು. ರಾಮರಾಜ್ಯದ ಕನಸು ನನಸಾಗಲಿ

ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿಯನ್ನು ಆಚರಿಸಲಾಯಿತು.ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸು ಬೆಂಗಳೂರು ಮಾತನಾಡಿ, ಮಹಾತ್ಮ ಗಾಂಧೀಜಿಯವರದು ಭಾರತವನ್ನು ರಾಮರಾಜ್ಯ ಹಾಗೂ ಸ್ವಚ್ಛ ಭಾರತ ಮಾಡುವ ಕನಸಾಗಿತ್ತು. ಇದರೊಂದಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದೊಂದಿಗೆ ಎಲ್ಲ ಇಲಾಖೆ ಹಾಗೂ ಸಂಘ- ಸಂಸ್ಥೆಗಳು ಸೇರಿ 17 ದಿನಗಳ ಕಾಲ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಅ. 2ರಂದು ಕೊನೆಗೊಳಿಸಿದ್ದು, ಇದು ಕೇವಲ ಗಾಂಧಿ ಜಯಂತಿಗೋಸ್ಕರ ಮಾತ್ರವಲ್ಲದೇ ವರ್ಷದ 365 ದಿನವೂ ಸ್ವಚ್ಛತೆಯ ಕಡೆಗೆ ಗಮನ ನೀಡಿ ಅವರ ಕನಸನ್ನು ನನಸು ಮಾಡಬೇಕು ಎಂದರು.ನಿವೃತ್ತ ಉಪನ್ಯಾಸಕ ಡಾ. ಜಿ.ಪಿ. ಪಾಠಣಕರ ಮಾತನಾಡಿ, ಕೇವಲ ಒಂದು ದಿನಕ್ಕೆ ಸ್ವಚ್ಛತೆಯನ್ನು ಮಾಡದೇ ಪ್ರತಿದಿನ ನಮ್ಮ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟರೆ ದೇಶ ತನ್ನಿಂದ ತಾನೇ ಸ್ವಚ್ಛವಾಗಿ ಇರಲು ಸಾಧ್ಯ ಎಂದರು.ಪಪಂ ಅಧ್ಯಕ್ಷ ನಾಗರಾಜ್ ಭಟ್, ಉಪಾಧ್ಯಕ್ಷ ಸುರೇಶ ಹೊನ್ನಾವರ ಉಪಸ್ಥಿತರಿದ್ದರು. ಪಪಂ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು, ವಿದ್ಯಾರ್ಥಿಗಳ ಪಾಲಕರು ಹಾಗೂ ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ