ಮತದಾರರ ಪಟ್ಟಿಯಿಂದ ಹೆಸರು ಕೈಬಿಡದಂತೆ ಜಾಗೃತಿ ವಹಿಸಿ

KannadaprabhaNewsNetwork |  
Published : Jun 24, 2026, 03:30 AM IST
ಹರಪನಹಳ್ಳಿ ನಗರದ ಕಾಂಗ್ರೆಸ್‌ ಭವನದಲ್ಲಿ  ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ  ಎಸ್‌ ಐ ಆರ್  ತರಬೇತು ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಂಗಳವಾರ ಶಾಸಕಿ ಎಂ.ಪಿ.ಲತಾ  ಮಾತನಾಡಿದರು. | Kannada Prabha

ಸಾರಾಂಶ

ಎಸ್‌ಐಆರ್‌ ತರುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನೇಕರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆಸಿದೆ.

ಹರಪನಹಳ್ಳಿ: ಎಸ್‌ಐಆರ್‌ ತರುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನೇಕರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆಸಿದೆ. ಇದನ್ನು ಅರ್ಥ ಮಾಡಿಕೊಂಡು ಮತದಾರರ ಪಟ್ಟಿಯಿಂದ ಯಾರ ಹೆಸರೂ ಕೈಬಿಡದಂತೆ ಜಾಗೃತಿ ವಹಿಸಿ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.ಅವರು ನಗರದ ಕಾಶಿ ಬಡಾವಣೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಬ್ಲಾಕ್‌ ಅಧ್ಯಕ್ಷರು, ಬೂತ್‌ ಏಜಂಟರು, ಬಿಎಲ್‌ಒ-2 ಅವರಿಗೆ ಎಸ್‌ಐಆರ್ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

ಬಿಜೆಪಿ ಸರ್ಕಾರ ಅತಿ ಹಿಂದುಳಿದವರು, ಕಾರ್ಮಿಕರು, ಎಸ್ಸಿ, ಎಸ್ಟಿ ವರ್ಗದವರನ್ನು ಮತದಾರರ ಪಟ್ಟಿಯಿಂದ ಹೊರ ದಬ್ಬುವ ಕೆಲಸ ಮಾಡುತ್ತಿದ್ದಾರೆ. ಉದಾಹರಣೆಗೆ ಪಶ್ಚಿಮ ಬಂಗಾಳ ರಾಜ್ಯ ಎಂದು ಹೇಳಿದರು.

ಜಿಪಂ, ತಾಪಂ, ಗ್ರಾಪಂ ಚುನಾವಣೆಗಳು ಬರುತ್ತವೆ. ಓಟು ಇಲ್ಲ ಅಂದರೆ ಯಾರ ಹತ್ತಿರ ಓಟು ಹಾಕಿಸಿಕೊಳ್ಳುತ್ತೀರಿ. ನಮ್ಮ ಹಕ್ಕನ್ನು ಕಸಿಯುವ ಕೆಲಸ ಮಾಡುವವರಿಗೆ ತಕ್ಕ ಉತ್ತರ ಕೊಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಮತದಾನದಿಂದ ಕೆಲವರನ್ನು ವಂಚಿತ ಮಾಡುವ ಉದ್ದೇಶದಿಂದ ಬಿಜೆಪಿಯವರು ಎಸ್‌ಐಆರ್‌ನ್ನು ತಂದಿದ್ದಾರೆ. ಬಿಎಲ್‌ಎಗಳು ಒಂದು ತಿಂಗಳು ತಾವು ಹಾಗೂ ತಮ್ಮ ಕುಟುಂಬದ ಮತಗಳನ್ನು ಮತಪಟ್ಟಿಯಲ್ಲಿ ಸೇರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಮತಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ ಸಿಗುವುದಿಲ್ಲ. ಇವು ಇಲ್ಲದಿದ್ದರೆ ಸರ್ಕಾರಿ ಸೌಲಭ್ಯಗಳು ಸಹ ದೊರಕುವುದಿಲ್ಲ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳ್ಳುವಂತೆ ನೋಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ನಗರಸಭಾ ಮಾಜಿ ಸದಸ್ಯ ಅಬ್ದುಲ್‌ ರಹಿಮಾನ್‌ ಸಾಹೇಬ್‌ ಮಾತನಾಡಿ, ಅರ್ಜಿ ಸಲ್ಲಿಸಿ ನಿಮ್ಮ ಮತಗಳನ್ನು ಪರಿಷ್ಕರಣೆ ಮಾಡಿಸಿ ಸ್ವಂತ ಕೆಲಸ ಎಂದುಕೊಂಡು ಮ್ಯಾಪಿಂಗ್‌ ಮಾಡಿಸಿ ನಿರ್ಲಕ್ಷ್ಯ ಬೇಡ ಎಂದು ಹೇಳಿದರು.

ಕಾಂಗ್ರೆಸ್ ಕಾನೂನು ಘಟಕದ ಟಿ.ವೆಂಕಟೇಶ ಮಾತನಾಡಿ, ಕೇಂದ್ರ ಸರ್ಕಾರದ ಕೆಟ್ಟ ಆಲೋಚನೆಯಿಂದ ಎಸ್‌ಐಆರ್‌ ನಡೆಯುತ್ತಿದೆ. ದೇಶದ ವ್ಯವಸ್ಥೆ ಬದಲಾವಣೆ ಮಾಡಲು ಹುನ್ನಾರ ನಡೆದಿದೆ. ಅದಕ್ಕೆ ಅವಕಾಶ ಕೊಡದೇ ಪ್ರತಿಯೊಬ್ಬರು ಮತಪಟ್ಟಿಯಲ್ಲಿ ತಮ್ಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೆಸರುಗಳನ್ನು ಸೇರಿಸಿ ಎಂದು ಹೇಳಿದರು.

ಚಿಗಟೇರಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಕುಬೇರಗೌಡ, ಪ್ರಚಾರ ಸಮಿತಿ ಅಧ್ಯಕ್ಷ ದೇವೇಂದ್ರಗೌಡ, ಹರಪನಹಳ್ಳಿ ಬ್ಲಾಕ್‌ ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ ಕೃಷ್ಣನಾಯ್ಕ, ಎಸ್ಟಿ ಘಟಕದ ಅಧ್ಯಕ್ಷ ಲಕ್ಕವಳ್ಳಿ ಹನುಮಂತಪ್ಪ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಜಯಲಕ್ಷ್ಮಿ, ವಸಂತಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಉದಯಶಂಕರ, ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಲಾಟಿ ದಾದಾಪೀರ, ಮುಖಂಡರಾದ ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ಉದ್ದಾರ ಗಣೇಶ, ಕೊಟ್ರೇಶ, ಜಾಕೀರ, ಅಭು, ಅಲ್ಲಾಭಕ್ಷಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇವಿನ ಹಣ್ಣಿಗೆ ಭಾರಿ ಬೇಡಿಕೆ
ಕಾರ್ಖಾನೆ ಬಾಧಿತ ಹಳ್ಳಿಗಳಿಗೆ ಸಿಎಂ ಭೇಟಿ ನೀಡಲಿ