ಕನ್ನಡಪ್ರಭ ವಾರ್ತೆ ನೆಲಮಂಗಲ/ದಾಬಸ್ಪೇಟೆ
ನೆಲಮಂಗಲ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಎಸ್ಐಆರ್ ಬಗ್ಗೆ ಬಿಎಲ್-2 ಕಾರ್ಯಾಗಾರದಲ್ಲಿ ಮಾತನಾಡಿದರು.
ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಎಸ್ಐಆರ್ ನಿಂದ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ, ಕೇರಳ ರಾಜ್ಯದಲ್ಲಿ ಮೊದಲೇ ಎಸ್ಐಆರ್ ಬಗ್ಗೆ ಜಾಗೃತಿ ವಹಿಸಿದ ಪರಿಣಾಮ ಕೇವಲ ಶೇ.3ರಷ್ಟು ಮತದಾರರು ಮಾತ್ರ ಡಿಲೀಟ್ ಆಗಿದ್ದಾರೆ. ಬಿಜೆಪಿ ಕರ್ನಾಟಕವನ್ನು ಗುರಿಯಾಗಿಸಿಕೊಂಡಿದ್ದು, ನಾವು ಸಹ ಕೇರಳದಂತೆ ಎಚ್ಚರಿಕೆ ವಹಿಸಬೇಕಿದೆ. ಮನೆ ಮನೆಗಳಿಗೆ ಭೇಟಿ ನೀಡಿ ನಮ್ಮ ಮತದಾರರನ್ನು ಉಳಿಸುವ ಕೆಲಸವನ್ನು ಮಾಡಬೇಕು. ಮುಂದಿನ ಗ್ರಾಪಂ, ತಾಪಂ, ಜಿಪಂ, ವಿಧಾನಸಭಾ ಚುನಾವಣೆಗಳಿಗೆ ತೊಂದರೆಯಾದಂತೆ ಎಚ್ಚರಿಕೆ ವಹಿಸಲು ಈಗಲೇ ಜಾಗೃತರಾಗಬೇಕು ಎಂದರು.ಗ್ಯಾರಂಟಿ ಬರಲ್ಲ:
ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ ಮಾತನಾಡಿ, ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ನಲ್ಲಿ ನಾವೆಲ್ಲರೂ ಭಾಗವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಬಿಜೆಪಿಯವರು ಲಾಭಮಾಡಿಕೊಂಡು ಚುನಾವಣೆ ಗೆಲ್ಲುತ್ತಾರೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.
ಎನ್ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ನಾರಾಯಣಗೌಡ, ನಗರಸಭೆ ಅಧ್ಯಕ್ಷ ಎನ್. ಗಣೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಹನುಮಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಪ್ರದೀಪ್, ಮಂಜುನಾಥ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ನಾಗರತ್ನಮ್ಮ ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ನಾರಾಯಣಗೌಡ, ಬಿ.ಜಿ.ವಾಸು, ಸಿ.ಎಂಗೌಡ, ಕೆ.ಕೃಷ್ಣಪ್ಪ, ಅರ್ಜುನ್, ಟಿ.ನಾಗರಾಜು, ಲಕ್ಷ್ಮೀನಾರಾ ಯಣ್ ಮತ್ತಿತರರು ಭಾಗವಹಿಸಿದ್ದರು.
ಕೋಟ್
- ಎನ್. ಶ್ರೀನಿವಾಸ್, ಶಾಸಕ, ನೆಲಮಂಗಲ