ದಾಬಸ್ಪೇಟೆ: ಸಾಮಾಜಿಕ ಜಾಲತಾಣಗಳಿಂದ ಸದುಪಯೋಗ ಒಂದು ಕಡೆಯಾದರೆ, ಇನ್ನೊಂದೆಡೆಗೆ ಅದರಿಂದ ತಪ್ಪು ದಾರಿ ಹಿಡಿಯುವ ಸಮಾಜವನ್ನು ನಾವು ನೋಡುತ್ತಿದ್ದು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ಉಪನ್ಯಾಸಕಿ ವಿಭಚಕ್ರಲಾ ಹೇಳಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕ್ಷೇತ್ರದ ಒಲವು ಕಡಿಮೆಯಾಗಿದೆ. ಯುವಜನಾಂಗ ಸಾಮಾಜಿಕ ಜಾಲತಾಣ ಹಾಗೂ ದಶ್ಯ ಮಾಧ್ಯಮಗಳ ಮೋಡಿಗೆ ಸಿಲುಕಿ ಪುಸ್ತಕ, ಸಾಹಿತ್ಯ ಓದುವ ಅಭಿರುಚಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಈ ನಿಟ್ಟಿನಲ್ಲಿ ಯುವಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಸಲಹೆ ನೀಡಿದರು.
ತುಮಕೂರು ರೋಟರಿ ಸೆಂಟ್ರಲ್ ಅಧ್ಯಕ್ಷೆ ಸರೋಜಮ್ಮ ಮಾತನಾಡಿದರು.ತುಮಕೂರು ರೋಟರಿ ಕಾರ್ಯದರ್ಶಿ ಹೇಮಲತಾ, ಮುಖ್ಯಶಿಕ್ಷಕ ಚಿಕ್ಕಣ್ಣ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು, ರೋಟರಿ ಪಧಾಧಿಕಾರಿಗಳು ಉಪಸ್ಥಿತರಿದ್ದರು.