ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯ ವಿಜಯಪುರ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮತ್ತು ಶ್ರೀ ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜ್ ಮುದ್ದೇಬಿಹಾಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಘೀ ದಿನ ಆಚರಣೆಯಲ್ಲಿ ಅವರು ಮಾತನಾಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಛಲವಾದಿ ಮಾತನಾಡಿ, ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಬಹಳ ಪ್ರಮುಖವಾಗಿದೆ. ಡೆಂಘೀ ಜ್ವರದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ವಿಪರೀತ ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲಾ ಸೇವೆಗಳು ಉಚಿತವಾಗಿರುತ್ತದೆ ಎಂದು ತಿಳಿಸಿದರು.ತಾಲೂಕು ವ್ಹಿ ಬಿ ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ ಮಾತನಾಡಿ, ಡೆಂಘೀ ಜ್ವರಕ್ಕೆ ಬ್ರೆಕ್ ಬೋನ್ ಫಿವರ್ ಎಂದು ಕರೆಯುತ್ತಾರೆ. ಅಷ್ಟು ಜ್ವರದ ತೀವ್ರತೆ ಇರುತ್ತದೆ. ಈ ರೋಗ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಕಾರಣ ಮನೆಯಲ್ಲಿರುವ ತೊಟ್ಟಿ, ಬ್ಯಾರೇಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನಃ ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೇಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.