ಕಲಬೆರಕೆ ಆಹಾರದ ಬಗ್ಗೆ ನಿರ್ಲಕ್ಷಿಸದೆ ಜಾಗ್ರತೆ ವಹಿಸಿ: ಡಾ. ಶೃತಿ ನಾಯಕ್

KannadaprabhaNewsNetwork |  
Published : Dec 10, 2025, 12:30 AM IST
ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಕಲಬೆರಕೆ ಆಹಾರ ಸೇವನೆ ಅತ್ಯಂತ ಅಪಾಯಕಾರಿಯಾಗಿದ್ದು, ನೇರವಾಗಿ ದೇಹದಲ್ಲಿ ದುಷ್ಪರಿಣಾಮ ಬೀರುವ ಕಲಬೆರೆಕೆ ಆಹಾರದ ಬಗ್ಗೆ ನಿರ್ಲಕ್ಷಿಸದೆ ಮುಂಜಾಗ್ರತಾ ಕ್ರಮದಿಂದ ಆರೋಗ್ಯ ಕಾಪಾಡಿಕೊಳ್ಳುವಂತೆ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಆಹಾರ ಮತ್ತು ಪೋಷಣೆ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶೃತಿ ನಾಯಕ್ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಕಲಬೆರಕೆ ಆಹಾರ ಸೇವನೆ ಅತ್ಯಂತ ಅಪಾಯಕಾರಿಯಾಗಿದ್ದು, ನೇರವಾಗಿ ದೇಹದಲ್ಲಿ ದುಷ್ಪರಿಣಾಮ ಬೀರುವ ಕಲಬೆರೆಕೆ ಆಹಾರದ ಬಗ್ಗೆ ನಿರ್ಲಕ್ಷಿಸದೆ ಮುಂಜಾಗ್ರತಾ ಕ್ರಮದಿಂದ ಆರೋಗ್ಯ ಕಾಪಾಡಿಕೊಳ್ಳುವಂತೆ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಆಹಾರ ಮತ್ತು ಪೋಷಣೆ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶೃತಿ ನಾಯಕ್ ಎಚ್ಚರಿಸಿದರು.

ತಾಲೂಕಿನ ಚುರ್ಚಿಗುಂಡಿ ಗ್ರಾಮದಲ್ಲಿ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಶಿವಮೊಗ್ಗ. ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಆಹಾರ ಕಲಬೆರಕೆ ವಿಷಯದ ಬಗೆಗಿನ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ಇತ್ತೀಚಿನ ವರ್ಷದಲ್ಲಿ ಕಲಬೆರಕೆ ಆಹಾರ ಪದಾರ್ಥಗಳ ಸೇವನೆ, ಬಳಕೆ ಹೆಚ್ಚಾಗಿದ್ದು, ಅತ್ಯಂತ ಅಪಾಯಕಾರಿಯಾದ ಕಲಬೆರಕೆ ಆಹಾರ ಸೇವನೆಯು ನೇರವಾಗಿ ದೇಹದಲ್ಲಿ ದುಷ್ಪರಿಣಾಮ ಉಂಟು ಮಾಡಲಿದೆ, ಈ ದಿಸೆಯಲ್ಲಿ ನಿತ್ಯ ಬೀದಿ ಬದಿ ಆಹಾರ ಸೇವನೆಯ ಅಬ್ಯಾಸ ಸ್ಥಗಿತಗೊಳಿಸುವಂತೆ ತಿಳಿಸಿದರು.

ಹೆಚ್ಚು ಕಲಬೆರಕೆ ಆಹಾರವನ್ನು ಸೇವಿಸುವವರಲ್ಲಿ ಅತಿಸಾರ, ಹೃದ್ರೋಗ, ಅಲರ್ಜಿ, ವರ್ಟಿಗೋ ಮಧುಮೇಹ ಮತ್ತಿತರ ಆರೋಗ್ಯ ಸಮಸ್ಯೆಗಳು ಸಾಮಾನ್ಯವಾಗಿದ್ದು, ಆಹಾರದ ಕಲಬೆರಕೆ ಸಾಮಾನ್ಯ ಸಮಸ್ಯೆ ಎಂಬ ಮಟ್ಟಿಗೆ ಬೆಳೆದು ಇದೀಗ ಆರೋಗ್ಯವಂತ ಸಮಾಜಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಕಲಬೆರಕೆ ಪದಾರ್ಥಗಳನ್ನು ಗುರುತಿಸುವ ರೀತಿ ತೋರಿಸಿಕೊಟ್ಟರು.

ಹಣ್ಣು ಮತ್ತು ತರಕಾರಿ ಕಲಬೆರಕೆ ಬಗ್ಗೆ ಅನುಮಾನವಿದ್ದಲ್ಲಿ ಹತ್ತಿ ಉಂಡೆಯನ್ನು ನೀರು ಅಥವಾ ಎಣ್ಣೆಯಲ್ಲಿ ಅದ್ದಿ ತರಕಾರಿ ಅಥವಾ ಹಣ್ಣುಗಳ ಮೇಲೆ ಉಜ್ಜಿದಾಗ ಹತ್ತಿಯ ಬಣ್ಣ ಬದಲಾದರೆ ಕೃತಕ ಬಣ್ಣದ ಲೇಪನ ಮಾಡಲಾಗಿದೆ ಎಂಬುದು ಸಾಬೀತಾಗಲಿದೆ. ಲೋಟ ನೀರಿಗೆ ಕೆಲ ಹನಿ ಜೇನುತುಪ್ಪ ಸೇರಿಸಿದಾಗ ತಳ ಸೇರಿದಲ್ಲಿ ಶುದ್ಧವಾಗಿದೆ ಹಾಗೂ ಸಕ್ಕರೆ ಅಥವಾ ಬೆಲ್ಲದ ಪಾಕ ಸೇರಿಸಿದಲ್ಲಿ ನೀರಿನಲ್ಲಿ ಕರಗುತ್ತದೆ ಎಂದು ತಿಳಿಸಿಕೊಟ್ಟರು.

ಗ್ರಾಮಸ್ಥರಾದ ಪ್ರತಿಮಾ, ಶುಭ, ಕುಸುಮಾ, ಲತಾ, ಪುಷ್ಪವತಿ, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ