ಹೊಸಪೇಟೆ: ಮಳೆಗಾಲದ ಆರಂಭದ ಈ ದಿನಗಳಲ್ಲಿ ನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಜಲಮೂಲ ಕಲುಷಿಗೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ಪ್ರತಿ ಗ್ರಾಪಂ ತಮಗೆ ನೀಡಿರುವ ಕಿಟ್ಗಳನ್ನು ಸಮರ್ಪಕವಾಗಿ ಬಳಸಿ, ನಿಯಮಿತವಾಗಿ ನೀರಿನ ಗುಣಮಟ್ಟ ತಪಾಸಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾಂಕ್ರಾಮಿಕ ರೋಗ ಮುಕ್ತ ಗ್ರಾಮವೇ ನಮ್ಮ ಗುರಿ: ಅಶುದ್ಧ ಹಾಗೂ ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದಲ್ಲಿ ಹರಡುವ ಕಾಲರಾ, ಕಾಮಾಲೆ, ಅತಿಸಾರ ಭೇದಿಯಂತಹ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಗ್ರಾಮದ ಜಲಮೂಲಗಳಲ್ಲಿ ಕ್ಲೋರಿನೇಷನ್ ಪ್ರಕ್ರಿಯೆಯನ್ನು ಸರಿಯಾದ ಪ್ರಮಾಣದಲ್ಲಿ ನಿರ್ವಹಿಸುವಂತೆ ಮತ್ತು ಶುದ್ಧ ಕುಡಿಯುವ ನೀರಿನ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು.ತಾಲೂಕಿನ ಎಲ್ಲ ಪಿಡಿಒಗಳು, ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಹಾಗೂ ಪ್ರಮುಖವಾಗಿ ಪ್ರತಿದಿನ ನೀರು ಸರಬರಾಜು ಮಾಡುವ ನೀರು ಗಂಟಿಗಳಿಗೆ ವಿಶೇಷ ನೀರಿನ ಪರೀಕ್ಷೆಯ ಕಿಟ್ ವಿತರಿಸಲಾಯಿತು.
ತಾಪಂ ಇಒ ಆಲಂ ಬಾಷಾ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ವಿಜಯಕುಮಾರ್, ಕಿರಿಯ ಅಭಿಯಂತರ ಸುರೇಶ್, ನರೇಶ್, ಸಹಾಯಕ ಅಭಿಯಂತರ ಮಹಾರುದ್ರಗೌಡ, ಹಿರಿಯ ರಸಾಯನ ತಜ್ಞ ಅರುಣಕುಮಾರ್ ಜಿ.ವಿ. ಇದ್ದರು.