ಕನ್ನಡಪ್ರಭ ವಾರ್ತೆ ಇಂಡಿ
ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ನಡೆದ ಪಿಡಿಒ ಮತ್ತು ತಾಲೂಕುಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ಬರಗಾಲ ಪರಿಸ್ಥಿತಿಯನ್ನು ಬಹಳ ಗಂಭೀರವಾಗಿ ಅನುಭವಿಸಿದ್ದೇವೆ. ಆದರೆ ಈ ಬಾರಿ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.
ಕಂದಾಯ, ಪೊಲೀಸ್, ಹೆಸ್ಕಾಂ ಇಲಾಖೆಯವರು ಮತ್ತು ಪಿಡಿಒಗಳು ಕಾಲುವೆ ನೀರು ರೈತರು ಕೃಷಿಗೆ ಬಳಸದಂತೆ ನೋಡಿಕೊಂಡರೆ ಕುಡಿಯುವ ನೀರಿನ ತೊಂದರೆ ಆಗುವುದಿಲ್ಲ. ಸಂಬಂಧಿಸಿದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ, ಸಣ್ಣ ನೀರಾವರಿ ಮತ್ತು ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹೆಚ್ಚಿನ ಜಾಗರೂಕತೆ ವಹಿಸಿ ಏಪ್ರಿಲ್- ಮೇ ಎರಡು ತಿಂಗಳಲ್ಲಿ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ತಾಪಂ ಇಒ ನಂದೀಪ ರಾಠೋಡ ಮಾತನಾಡಿ, ಈ ಬಾರಿ ತಾಲೂಕು ಬರಗಾಲ ಎಂದು ಘೋಷಿಸಿಲ್ಲ. ಹೀಗಾಗಿ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸಲು ಅನುದಾನ ಬರುವುದಿಲ್ಲ. ಕಾರಣ ಇದ್ದ ಎಲ್ಲ ಸಂಪನ್ಮೂಲ ಬಳಸಿಕೊಂಡು ನೀರಿನ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು. ಅವಶ್ಯವೆನಿಸಿದ್ದಲ್ಲಿ ಪಿಡಿಓಗಳು ಗ್ರಾಪಂ ಸಂಪನ್ಮೂಲ ಬಳಕೆ ಮಾಡಿಕೊಳ್ಳಲು ತಿಳಿಸಿದರು.
ಕೆಬಿಜೆಎನ್ಎಲ್ ರಾಂಪೂರ ಅಧೀಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ, ಹೆಸ್ಕಾಂ ಎಇಇ ಎಸ್.ಆರ್.ಮೆಂಡೆಗಾರ, ಹಿರಿಯ ಪಶು ವೈದ್ಯಾಧಿಕಾರಿ ಡಾ.ರಾಜಕುಮಾರ ಅಡಕಿ, ಎಇಇ ಗ್ರಾಮೀಣ ನೀರು ಸರಬರಾಜು ಎಸ್.ಬಿ.ಪಾಟೀಲ ಮಾತನಾಡಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ತಾಲೂಕಿನಲ್ಲಿರುವ ಸಂಗೋಗಿ, ಹಂಜಗಿ, ಅರ್ಜನಾಳ ಮತ್ತು ಲೋಣಿ ಬಿಕೆ ಕೆರೆಗಳನ್ನು ತುಂಬಿದ್ದು ಬರುವ ದಿನಗಳಲ್ಲಿ ಆ ನೀರನ್ನು ಕೆರೆಗಳ ಮೂಲಕ ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ಪೂರೈಸಲಾಗುತ್ತದೆ.