ಸಾಮಾಜಿಕ ಆಸ್ಥೆ ವಿದ್ಯಾಸಂಸ್ಥೆಗೆ ಅರ್ಪಿತವಾಗಿರಲಿ: ಸೂಡಾ ಅಧ್ಯಕ್ಷ ಸುಂದರೇಶ್

KannadaprabhaNewsNetwork |  
Published : Aug 22, 2024, 12:46 AM IST
ಪೊಟೊ: 21ಎಸ್ಎಂಜಿಕೆಪಿ01ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಗಣ್ಯರಯ ಗುದ್ದಲಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಗಣ್ಯರಯ ಗುದ್ದಲಿ ಪೂಜೆ ನೆರವೇರಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಮ್ಮಲ್ಲಿರುವ ಸಾಮಾಜಿಕ ಕಳಕಳಿ ನಾವು ಓದಿದ ವಿದ್ಯಾಸಂಸ್ಥೆಗೆ ಸದಾ ಅರ್ಪಿತವಾಗಿರಲಿ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೂಡಾ ಅಧ್ಯಕ್ಷರಾದ ಎಚ್.ಎಸ್.ಸುಂದರೇಶ್ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ನೂತನ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಹಿರಿಯ ವಿದ್ಯಾರ್ಥಿಗಳ ಕಾರ್ಯ ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿರಲಿ. ಕಾಲೇಜಿನಲ್ಲಿ ಓದಿದ್ದ ಅನೇಕ‌ ವಿದ್ಯಾರ್ಥಿಗಳು ಆಂಧ್ರ, ಕರ್ನಾಟಕದ ರಾಜಕಾರಣಿದಲ್ಲಿ, ವಿವಿಧ ಇಲಾಖೆಗಳ ಅಧಿಕಾರಿಗಳಾಗಿ, ವಿಭಿನ್ನ ಕ್ಷೇತ್ರಗಳ ಸಾಧಕರಾಗಿ ಹೊರಹೊಮ್ಮಿದ್ದಾರೆ. ಇಂದಿಗೂ ಲಾಭ-ನಷ್ಟದ ಲೆಕ್ಕಾಚಾರವಿಲ್ಲದೆ ಎನ್ಇಎಸ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಹೊರನಾಡು ಕ್ಷೇತ್ರದ ಧರ್ಮದರ್ಶಿ ಕುಟುಂಬದ ಸದಸ್ಯರು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಜಗೋಪಾಲ್ ಜೋಷಿ ಮಾತನಾಡಿ, ವಿದ್ಯಾಸಂಸ್ಥೆ ನಮಗೆ ಜ್ಞಾನದ ಮೂಲಕ ವ್ಯಕ್ತಿತ್ವ ನೀಡಿದೆ. ಅಂತಹ ಸಂಸ್ಥೆಗೆ ಋಣ ತೀರಿಸುವ ಎಂತಹ ಅವಕಾಶ ಸಿಕ್ಕರು ಉಪಯೋಗಿಸಿಕೊಳ್ಳಬೇಕು.‌ ನಮ್ಮ ಹೆಮ್ಮೆಯ ಹಿರಿಯ ವಿದ್ಯಾರ್ಥಿಗಳ ಕಟ್ಟಡವನ್ನು ಗುರು ದಕ್ಷಿಣೆಯ ರೂಪದಲ್ಲಿ ದೊಡ್ಡ ಹೆಮ್ಮರವಾಗಿ ತಲೆಯೆತ್ತಿ ನಿಲ್ಲುವಂತೆ ಮಾಡೋಣ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಎನ್ಇಎಸ್ ನಿರ್ದೇಶಕರಾದ ಟಿ.ಆರ್. ಅಶ್ವಥನಾರಾಯಣ ಶ್ರೇಷ್ಟಿ, ಎಚ್.ಸಿ.ಶಿವಕುಮಾರ್, ಹಿರಿಯ ಆಜೀವ ಸದಸ್ಯರಾದ ಎ.ಎಸ್.ವಿಶ್ವನಾಥ, ರುಕ್ಮಿಣಿ ವೇದವ್ಯಾಸ, ರವೀಂದ್ರ, ವಿಖ್ಯಾತ, ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಡಾ.ಕೆ.ಎಂ. ಬಸಪ್ಪಾಜಿ, ಸರ್ಜಾ ಸತ್ಯೋದಯ, ಜಿ.ಸುರೇಶ್, ಶಾಂತಿ ಕಿರಣ್ ಸೇರಿದಂತೆ ಮತ್ತಿತರರಿದ್ದರು.

800 ಆಸನಗಳ ಸಭಾಂಗಣ ನಿರ್ಮಾಣ

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ಯೋಜಿತ ಕಟ್ಟಡದಲ್ಲಿ 800 ಆಸನಗಳ ಸುಸಜ್ಜಿತ ಸಭಾಂಗಣ ನಿರ್ಮಾಣವಾಗಲಿದ್ದು, ಅತಿಥಿ ಗೃಹ, ಪಾರ್ಕಿಂಗ್ ಸೌಲಭ್ಯಗಳೊಂದಿಗೆ ಮಲೆನಾಡಿನ ಭಾಗದಲ್ಲಿಯೇ ವಿಶೇಷ ವಿನ್ಯಾಸದ ಕಟ್ಟಡ ನಿರ್ಮಾಣ ಮಾಡುವ ಇಂಗಿತ ನಮ್ಮದಾಗಿದೆ ಎಂದು ವಿವರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೆಸ್ಸೆಸ್ಸನ್ನು ದೆವ್ವಕ್ಕೆ ಹೋಲಿಸಿದ ಪ್ರಿಯಾಂಕ್‌
ಸಿಲಿಕಾನ್‌ ಸಿಟಿಯಲ್ಲಿ ಮಹಾಶಿವರಾತ್ರಿ ಸಂಭ್ರಮ