ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಶಾಸಕ ರಮೇಶ ಜಾರಕಿಹೊಳಿ

KannadaprabhaNewsNetwork |  
Published : Jul 22, 2024, 01:20 AM IST
ಗೋಕಾಕ ನಗರದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸಂಭವನೀಯ ಪ್ರವಾಹ ಮುನ್ನೆಚ್ಚರಿಕೆ ಕುರಿತು ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿದರು. | Kannada Prabha

ಸಾರಾಂಶ

ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸಂಭವನೀಯ ಪ್ರವಾಹ ಮುನ್ನೆಚ್ಚರಿಕೆ ಕುರಿತು ಕಂದಾಯ ಇಲಾಖೆ, ತಾಪಂ, ನಗರಸಭೆ, ಪಟ್ಟಣ ಪಂಚಾಯತಿ, ಲೋಕೋಪಯೋಗಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿ, ಸಂಭನೀಯ ಪ್ರವಾಹ ನಿಯಂತ್ರಿಸಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ನಗರದಲ್ಲಿ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮವಾಗುವ ಹಿನ್ನೆಲೆ ನದಿ ತೀರದ ಜನವಸತಿ ಪ್ರದೇಶಗಳಿಗೆ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ, ಬಳ್ಳಾರಿ ನಾಲಾ ಮತ್ತು ಮಾರ್ಕಂಡೇಯ ನದಿಯ ನೀರು ಅಂಕಲಗಿ ಕುಂದರಗಿ ಸೇರಿ ಇನ್ನಿತರ ಪ್ರದೇಶಗಳಲ್ಲಿ ಮಳೆ ನಿರಂತರವಾಗಿ ಸುರಿದರೆ ಪ್ರವಾಹ ಪರಿಸ್ಥಿತಿ ತೆಲೆದೊರಬಹುವುದು. ಹೀಗಾಗಿ ಜನರು ಮತ್ತು ಜಾನುವಾರುಗಳ ಸುರಕ್ಷತೆಗೆ ಕ್ರಮವಹಿಸಿ, ಗ್ರಾಮೀಣ ಭಾಗದಲ್ಲಿ ಮಳೆಯಿಂದಾಗಿ ರೋಗ ರುಜಿನುಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಹೆಚ್ಚಿನ ಗಮನವಹಿಸಿ ರೋಗ ಹರಡದಂತೆ ತಡೆಯಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಕಳೆದೆರಡು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚುತ್ತಿದ್ದು, ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ. ಪಿಡಬ್ಲುಡಿ ಅಧಿಕಾರಿಗಳು ಗುಂಡಿ ಮುಚ್ಚಿಸುವ ಕಾರ್ಯ ಮಾಡಬೇಕು. ಈಗಾಗಲೇ ಮಾರ್ಕಂಡೇಯ ನದಿ ಮತ್ತು ಘಟಪ್ರಭಾ ನದಿಗೆ ಜಲಾಶಯಗಳಿಂದ ನೀರು ಹರಿ ಬಿಡುತ್ತಿದ್ದು, ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ ಎಂದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇತರರು ಇದ್ದರು.

ಸದ್ಯಕ್ಕೆ ಯಾವುದೇ ಪ್ರವಾಹದ ಆತಂಕವಿಲ್ಲ. ಭಯ ಪಡುವ ಅಗತ್ಯವಿಲ್ಲ. ಮಳೆಯ ಪ್ರಾಮಾಣ ಹೆಚ್ಚಾದಲ್ಲಿ ಪ್ರವಾಹ ಸಂಭವಿಸುವ ಸೂಚನೆ ಇದ್ದು, ನದಿ ತಟದ ಜನರು ತಮ್ಮ ಹಾಗೂ ಜಾನುವಾರುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಮತ್ತು ನದಿ, ತುಂಬಿ ಹರಿಯುತ್ತಿರುವ ಸೇತುವೆಗಳ ಮೇಲೆ ವಾಹನ ಚಲಾಯಿಸುವ ಮೊಂಡುಧೈರ್ಯ ಮಾಡಬಾರದು.

-ರಮೇಶ ಜಾರಕಿಹೊಳಿ ಶಾಸಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ