ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಿ

KannadaprabhaNewsNetwork |  
Published : Jul 29, 2025, 01:00 AM IST
ಪೊಟೊ: 28ಎಸ್‌ಎಂಜಿಕೆಪಿ08 | Kannada Prabha

ಸಾರಾಂಶ

ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಬೇಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್‌ ಮೂರ್ತಿ ಹೇಳಿದರು.

ಶಿವಮೊಗ್ಗ: ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಬೇಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್‌ ಮೂರ್ತಿ ಹೇಳಿದರು.ಇಲ್ಲಿನ ಎಟಿಎನ್‌ಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಬಹಳ ಮಹತ್ವವಾದದ್ದು. ಎಲ್ಲಾ ಇಷ್ಟ-ಕಷ್ಟಗಳನ್ನು ದಾಟಿ, ಈಗ ಜವಾಬ್ದಾರಿ ಸ್ಥಾನದಲ್ಲಿ ವ್ಯಾಸಂಗ ಮಾಡುತ್ತಿರುವಿರಿ. ಅಂಕಗಳನ್ನು ಪಡೆಯುವುದಷ್ಟೇ ಮುಖ್ಯವಲ್ಲ, ಇದರ ಜೊತೆಗೆ ಮಾನವೀಯತೆ, ಅಂತಃಕರಣ ಬೆಳೆಸಿಕೊಳ್ಳಬೇಕು. ನೀವು ಪಡೆದ ಶಿಕ್ಷಣ ನೊಂದವರ ಕಣ್ಣೀರು ಒರೆಸುವಂತಾಗಬೇಕು. ಮಿತಿಮೀರಿದ ಆಕಾಂಕ್ಷೆಗಳು, ಅನಗತ್ಯ ಒತ್ತಡಗಳನ್ನು ಸೃಷ್ಟಿಸುತ್ತಿವೆ. ಅವುಗಳಿಂದ ಹೊರಬನ್ನಿ, ಭ್ರಮೆಗಳನ್ನು ಕಳಚಿಡಿ. ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಿರುವಿರಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ ಕುಮಾರ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಹೋದರತೆ ಮತ್ತು ಸಾಮರಸ್ಯತೆಯನ್ನು ಮೂಡಿಸುತ್ತದೆ. ಪಠ್ಯಚಟುವಟಿಕೆಗಳ ಜೊತೆಗೆ ಪಕ್ಷೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ರೋಟರಿ ಪೂರ್ವ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಧನಂಜಯ ಅವರನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲೆ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಸಂಚಾಲಕ ಪ್ರೊ.ಕೆ.ಎಂ.ನಾಗರಾಜ್, ಐಕ್ಯೂಎಸಿ ವಿಭಾಗದ ಪ್ರೊ. ಎನ್.ಮಂಜುನಾಥ್, ಪ್ರೊ.ಸೌರ್ಪಣಿಕಾ ಉಮೇಶ್, ಪ್ರೊ.ನವೀನ್ ತೇಲ್ಕರ್, ಪ್ರೊ.ಕೆ.ಶೃತಿ, ಪ್ರೊ.ಎಂ.ಕೆ.ಶ್ರೀಲಲತಾ ಮತ್ತಿತರರಿದ್ದರು.

------------------

ಪೊಟೊ: 28ಎಸ್‌ಎಂಜಿಕೆಪಿ08

ಪೊಟೊ: 28ಎಸ್‌ಎಂಜಿಕೆಪಿ08

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ