ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ರೋಟರಿ ಬಾಲಭವನದಲ್ಲಿ ಸೋಮವಾರ ಪ್ರಜಾ ಪರಿವರ್ತನಾ ವೇದಿಕೆ ರಾಜ್ಯ ಹಾಗೂ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಹಾಗೂ ಜೋಗೇಂದ್ರ ಸಿಂಗ್ ಮಂಡಲ್ರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ ಸಂವಿಧಾನದ ಬಗ್ಗೆ ಹೆಚ್ಚು ಹೆಚ್ಚು ವಿಷಯಗಳ ನಾವು ತಿಳಿದುಕೊಳ್ಳಬೇಕು. ಮನೆ ಮನೆಗೆ ಸಂವಿಧಾನ ಹಾಗೂ ಸಂವಿಧಾನದ ಆಶಯಗಳ ತಿಳಿಸುವ ಕೆಲಸ ಪ್ರಜಾ ಪರಿವರ್ತನಾ ಸಂಘಟನೆ ಮಾಡಬೇಕು. ಈ ಮೂಲಕ ಗ್ರಾಮಾಂತರ ಪ್ರದೇಶದಲ್ಲಿ ಸಾಮಾನ್ಯ ಜನರು ಸಂವಿಧಾನದ ಬಗ್ಗೆ ಮಾತನಾಡುವಂತಾಗಬೇಕು ಎಂದು ತಿಳಿಸಿದರು.
ದಾರಿ ಯಾವುದೇ ರೀತಿ ಇರಲಿ, ಅದನ್ನು ಸರಿಪಡಿಸುವ ಬುದ್ಧಿವಂತಿಕೆ ಬೆಳೆಸಿಕೊಂಡು, ಸಮಾಜ ಪರಿವರ್ತನೆ, ಬದಲಾವಣೆ ತರುವ ಜವಾಬ್ದಾರಿ ಬೆಳೆಸಿಕೊಳ್ಳಬೇಕು. ಸಮಾಜವು ನಮಗೇನು ಮಾಡಿದೆಯೆಂದು ಪ್ರಶ್ನಿಸುತ್ತಾ ಕೂರುವ ಬದಲಿಗೆ, ಸಮಾಜಕ್ಕೆ ನಾವೇನು ಕೊಡುಗೆ ನೀಡಬೇಕು ಎಂಬುದಾಗಿ ನಮಗೆ ನಾವೇ ಕೇಳಿಕೊಂಡು, ನಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.ಮನುಷ್ಯರಾದ ನಮಗೆ ಯಾವುದನ್ನು ಕೆಡಿಸಿದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲವೋ ಅಂತಹದ್ದನ್ನು ಯಾವುದೇ ಕಾರಣಕ್ಕೂ ಕೆಡಿಸುವ ಕೆಲಸ ಮಾಡಬಾರದು. ಒಂದು ವೇಳೆ ನಮಗೆ ಯಾವುದೋ ಒಂದು ಮರ ಟೊಂಗೆ ತುಂಡರಿಸಿದರೆ ಮತ್ತೆ ಅದನ್ನು ಅದೇ ಜಾಗಕ್ಕೆ ಸೇರಿಸುವ ಶಕ್ತಿ ಇರಬೇಕು. ಹಾಗಿದ್ದರೆ ಟೊಂಗೆ ಕತ್ತರಿಸಬೇಕು. ಅದನ್ನು ಜೋಡಿಸುವ ಶಕ್ತಿ ಇಲ್ಲವೆಂದರೆ, ಟೊಂಗೆ ಮುರಿಯುವ, ಕತ್ತರಿಸುವಂತಹ ಕೆಲಸಕ್ಕೆ ಯಾವುದೇ ಕಾರಣಕ್ಕೂ ಕೈಹಾಕಬಾರದು. ಅಂಗುಲಿಮಾಲನನ್ನು ಭಗವಾನ್ ಬುದ್ಧ ಸಹ ಇದೇ ರೀತಿ ಪರಿವರ್ತನೆ ಮಾಡಿದರು ಎಂದು ಕಿವಿಮಾತು ಹೇಳಿದರು.