ಬದುಕಿಗೆ ಸಹಕರಿಸುವ ಪರಿಸರಕ್ಕೆ ಅಭಿಮಾನಿಯಾಗಿ

KannadaprabhaNewsNetwork |  
Published : Jun 06, 2025, 12:15 AM ISTUpdated : Jun 06, 2025, 12:16 AM IST
5ಐಎನ್‌ಡಿ1, ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ಜ್ಞಾನಯೋಗಿ ಶ್ರಿ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋಧ್ಯಾನದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಾಕ್ರಮ ಉದ್ಘಾಟಿಸಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಒಬ್ಬರ ಅಭಿಮಾನಿ ಆಗುವುದಕ್ಕಿಂತ ಪರಿಸರದ ಅಭಿಮಾನಿಯಾಗಬೇಕು. ಪರಿಸರ ಪ್ರೇಮಿಯಾಗಬೇಕು

ಕನ್ನಡಪ್ರಭ ವಾರ್ತೆ ಇಂಡಿ

ಗಿಡ-ಮರಗಳು ಕಡಿದರೆ ನಮ್ಮನ್ನೇ ನಾವು ತೊಂದರೆಯಲ್ಲಿ ಸಿಲುಕುವ ವಾತವರಣ ಸೃಷ್ಟಿಸಿಕೊಂಡಂತೆ. ಭವಿಷ್ಯಕ್ಕಾಗಿ ಕಳಕಳಿಯಿಂದ ಪರಿಸರ ಸಂರಕ್ಷಣೆ ಮಾಡಬೇಕು. ಜೀವಸಂಕುಲಗಳ ಬದುಕಿಗೆ ನಿಸರ್ಗ ಸಹಾಯ ಮಾಡುತ್ತದೆ. ಒಬ್ಬರ ಅಭಿಮಾನಿ ಆಗುವುದಕ್ಕಿಂತ ಪರಿಸರದ ಅಭಿಮಾನಿಯಾಗಬೇಕು. ಪರಿಸರ ಪ್ರೇಮಿಯಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಯಶವಂತರಾಯಗೌಡ ಪಾಟೀಲ ಫೌಂಡೇಶನ್‌ ಪಡನೂರ, ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ್‌ ದೊರೆಯಲಿದೆ. ಪರಿಸರದ ಸೌಂದರ್ಯವೂ ಹೆಚ್ಚಾಗಲಿದೆ. ಮುಂದಿನ ಪೀಳಿಗೆಗಾಗಿ ಆರೋಗ್ಯಯುತ ವಾತಾವರಣ ಕೊಂಡ್ಯೊಯಬೇಕಾದರೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಎಸಿ ಅನುರಾಧಾ ವಸ್ತ್ರದ ಮಾತನಾಡಿ, ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂ.5ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಪರಿಸರ ನಾಶದಿಂದ ಪ್ರಾಣಿ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಗುರುದೇವಾಶ್ರಮದ ಅಮೃತಾನಂದ ಮಹಾಸ್ವಾಮೀಜಿ ಮಾತನಾಡಿ, ವೃಕ್ಷ, ಪರಿಸರ ಪ್ರೇಮಿಯಾಗಿದ್ದ ಸಿದ್ದೇಶ್ವರ ಶ್ರೀಗಳು ವಿಜಯಪುರದ ಆಶ್ರಮದಲ್ಲಿ ಗಿಡಗಳನ್ನು ಹಚ್ಚಿದ್ದಾರೆ. ಪರಿಸರದ ಬಗ್ಗೆ ಸದಾ ಕಾಳಜಿ ಹೊಂದಿರುವ ಶ್ರೀಗಳ ಆದರ್ಶವನ್ನು ಪ್ರತಿಯೊಬ್ಬರ ಪಾಲಿಸಿಕೊಂಡು ಪರಿಸರ ರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸಬೇಕು. ಇದು ಪರಿಸರವನ್ನು ಉಳಿಸುವ ಮಾರ್ಗ. ಮರ-ಗಿಡಗಳನ್ನು ಪೋಷಿಸಿದರೆ, ನಮ್ಮ ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರವೂ ಸಂರಕ್ಷಣೆ ಆಗುತ್ತದೆ. ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಪರಿಸರ ರೋಗಗ್ರಸ್ಥವಾದರೆ ಪ್ರಾಣಿ ಪ್ರಪಂಚವೂ ರೋಗಿಯಾಗುತ್ತದೆ. ಪರಿಸರ ಶ್ರೀಮಂತವಾದರೆ ನಾವೆಲ್ಲ ಶ್ರೀಮಂತರಾಗುತ್ತೇವೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎನ್‌.ಡಿ.ಪಾಟೀಲ,ಎಸ್‌.ಎಚ್.ವಾಸನ ಮಾತನಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವನೀತಾ ಆರ್‌. ಪ್ರಾಸ್ತಾವಿಕವಾಗಿ ಮಾತನಾಡಿದರು. ಫೌಂಡೇಶನ್‌ದ ಅಧ್ಯಕ್ಷ ವಿಠಲಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಡಿವೈಎಸ್ಪಿ ಜಗದೀಶ, ತಹಸೀಲ್ದಾರ್‌ ಬಿ.ಎಸ್‌.ಕಡಕಭಾವಿ, ಚಡಚಣ ತಹಸೀಲ್ದಾರ್‌ ಎಸ್‌.ಬಿ.ಇಂಗಳೆ, ತಾಪಂ ಇಒ ನಂದೀಪ ರಾಠೋಡ, ಚಡಚಣ ಇಒ ಸಂಜಯ ಖಡಗೆಕರ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಚಡಚಣ ಬಿಇಒ ಸುಜಾತಾ ಹುನ್ನೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ಆರ್‌.ನಡುಗಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಎಚ್‌.ಪಾಟೀಲ, ಕ್ರೀಡಾಧಿಕಾರಿ ಸಿ.ಎಸ್‌.ವಾಲಿಕಾರ, ದುಂಡಪ್ಪ ಸಾಹುಕಾರ ಖೇಡ, ಎಂ.ಆರ್‌.ಪಾಟೀಲ, ಶ್ರೀಮಂತ ಇಂಡಿ, ಭೀಮು ಗಡ್ಡದ, ಗ್ರಾಪಂ ಅಧ್ಯಕ್ಷೆ ಸಾವಿತ್ರಿ ಮೋರೆ, ಜಗದೀಶ ಕ್ಷತ್ರಿ ಮೊದಲಾದವರು ವೇದಿಕೆ ಮೇಲೆ ಇದ್ದರು.

ಇಲಿಯಾಸ ಬೊರಾಮಣಿ, ಪ್ರಶಾಂತ ಕಾಳೆ, ಜಾವೀದ ಮೋಮಿನ, ಜಟ್ಟೆಪ್ಪ ರವಳಿ, ಭೀಮಣ್ಣ ಕವಲಗಿ, ಸದಾಶಿವ ಪ್ಯಾಟಿ, ಮಹೇಶ ಹೊನ್ನಬಿಂದಗಿ, ಮಲ್ಲಿಕಾರ್ಜುನ ಅತನೂರ, ಆರ್‌ಎಫ್ಓ ಸಂಗಾಲಕ, ಮಂಜುನಾಥ ಧುಳೆ, ಅಶೋಕ ಕನ್ನೂರ, ಶಿವು ಬಿಸನಾಳ, ಶಿವು ಬಡಿಗೇರ, ಪಿಡಿಒ ಸಿ.ಜಿ.ಪಾರೆ ಮೊದಲಾದವರು ಕಾರ್ಯಕ್ರಮದಲ್ಲಿ ಇದ್ದರು. ಇದಕ್ಕೂ ಮುಂಚೆ ಹೊರ್ತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಿಂದ ಪರಿಸರ ರಕ್ಷಣೆಯ ಜಾಥಾ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಜಾಥಾ ನಡೆಯಿತು. ಇಂಡಿ, ಚಡಚಣ ಶೈಕ್ಷಣಿಕ ವಲಯದ ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಅರಣ್ಯಾಧಿಕಾರಿ ಧನರಾಜ ಮುಜಗೊಂಡ ನಿರೂಪಿಸಿದರು. ಪುಂಡಲೀಕ ಹೂಗಾರ ಸ್ವಾಗತಿಸಿದರು. ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮಣ ನಾದ ವಂದಿಸಿದರು.

ಆಲಮಟ್ಟಿ ಡ್ಯಾಮ್‌ನಿಂದ ನಮ್ಮ ಪಾಲಿಗೆ ಬರಬೇಕಾದ 80 ಟಿಎಂಸಿ ನೀರು ಬಳಕೆ ಮಾಡಿಕೊಂಡರೆ ವಿಜಯಪುರ ಜಿಲ್ಲೆ ನಂದನವನವಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಕೃಷ್ಣಾ ವ್ಯಾಜ್ಯ ಬಗೆಹರಿಸಿಕೊಡಬೇಕು. ಪಕ್ಕದ ರಾಜ್ಯ ಡ್ಯಾಂ ಎತ್ತರ ಕುರಿತು ಖ್ಯಾತೆ ತಗೆಯುತ್ತಿದ್ದು, ಅವರಿಗೆ ತಿಳುವಳಿಕೆ ಹೇಳುವ ಕೆಲಸ ಮಾಡಬೇಕು. ಆಲಮಟ್ಟಿ ಡ್ಯಾಂ ಎತ್ತರವಾದರೆ ಅವಳಿ ಜಿಲ್ಲೆಯ ಲಕ್ಷಾಂತರ ಭೂಮಿ ನೀರಾವರಿಗೆ ಒಳಪಡುತ್ತದೆ. 80 ಟಿಎಂಸಿ ನೀರು ಬಳಸಿಕೊಂಡರೆ ಈ ಭಾಗದಲ್ಲಿ ನೀರಾವರಿಯಾಗಿ ಬದಲಾವಣೆಗೆ ನಾಂದಿ ಹಾಡಿದಂತಾಗುತ್ತದೆ.

ಯಶವಂತರಾಯಗೌಡ ಪಾಟೀಲ, ಶಾಸಕ ಇಂಡಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌