ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಸವಿತಾ ಸಮಿತಿ ಹಾಗೂ ವಿವಿಧ ಇಲಾಖೆ ಸಂಯುಕ್ತಾಶ್ರಯದಲ್ಲಿ ವೀರಶೈವ ಕಲ್ಯಾಣ ಮಂಟಪ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಶ್ರೇಷ್ಠತೆಗೆ ಸವಿತಾ ಮಹರ್ಷಿ ಶ್ರಮಿಸಿದ್ದಾರೆ. ಸಮುದಾಯದವರು ಆರ್ಥಿಕ, ಸಾಮಾಜಿಕ ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ. ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲ ಪುರುಷರು. ಮಹರ್ಷಿಗಳು ದೇವಾನುದೇವತೆಗಳಿಗೆ ಕ್ಷೌರಿಕ ಮಾಡುತ್ತಿದ್ದರು ಎಂಬ ನಂಬಿಕೆ ಇದೆ. ಅಲ್ಲದೆ ದೇವತೆಗಳ ಜೊತೆಗೆ ತಪಸ್ಸು ಮಾಡುತ್ತಿದ್ದರು ಎಂದು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಹ ಶಿಕ್ಷಕ ಅಶೋಕ್ ಹಡಪದ ಅವರು, ಶೈಕ್ಷಣಿಕ, ಆರ್ಥಿಕ ರಾಜಕೀಯವಾಗಿ ಹಿಂದುಳಿದವರ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ಸಾಧಕ ಇವರು ಕ್ಷತ್ರಿಯ ವಿದ್ಯೆ, ಕ್ಷೌರಿಕ, ಸಂಗೀತ ವಾದ್ಯ ನುಡಿಸುವದರಲ್ಲಿ ಪಾರಂಗತ ಹೊಂದಿದ್ದರು. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ ಅವರಿಗೆ ಆಶ್ರಯ ನೀಡಿದ ಸವಿತಾ ಸಮಾಜದ ದೊರೆ ಬಿಜ್ಜಳ ಎಂಬುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.