ಪರಿಸರಕ್ಕೆ ಹಾನಿಯಾಗದಂತೆ ಬೇಡ್ತಿ –ವರದಾ ನದಿ ತಿರುವು ಆಗಲಿ: ಬೊಮ್ಮಾಯಿ

KannadaprabhaNewsNetwork |  
Published : Dec 07, 2025, 03:45 AM IST
ಪೊಟೋ6ಎಸ್.ಆರ್‌.ಎಸ್‌4 (ಮಾಧ್ಯಮದವರ ಜತೆ ಬಸವರಾಜ ಬೊಮ್ಮಾಯಿ ಮಾತನಾಡಿದರು.) | Kannada Prabha

ಸಾರಾಂಶ

ಈ ಹಿಂದಿನ ಯೋಜನೆಯ ಸಮಗ್ರ ವರದಿ ಬದಲಿಸಿ ಹೊಸದಾಗಿ ಸಿದ್ಧಪಡಿಸಲಾಗಿದೆ. ಆದರೂ ಜನರಲ್ಲಿ ಆತಂಕವಿರುವ ಕಾರಣ ರಾಜ್ಯ ಸರ್ಕಾರದಲ್ಲಿ ಆ ಬಗ್ಗೆ ಚರ್ಚಿಸಿ ಯಾರಿಗೂ ತೊಂದರೆಯಾಗದ ರೀತಿ ನೀರು ಕೊಂಡೊಯ್ಯಲು ಸಿದ್ಧತೆ ಮಾಡಲಾಗುವುದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪರಿಸರಕ್ಕೆ ಹಾನಿಯಾಗದಂತೆ ಬೇಡ್ತಿ–ವರದಾ ನದಿ ತಿರುವು ಆಗಬೇಕು. ಹೀಗಾಗಿಯೇ ಈ ಹಿಂದಿನ ಯೋಜನೆಯ ಸಮಗ್ರ ವರದಿ ಬದಲಿಸಿ ಹೊಸದಾಗಿ ಸಿದ್ಧಪಡಿಸಲಾಗಿದೆ. ಆದರೂ ಜನರಲ್ಲಿ ಆತಂಕವಿರುವ ಕಾರಣ ರಾಜ್ಯ ಸರ್ಕಾರದಲ್ಲಿ ಆ ಬಗ್ಗೆ ಚರ್ಚಿಸಿ ಯಾರಿಗೂ ತೊಂದರೆಯಾಗದ ರೀತಿ ನೀರು ಕೊಂಡೊಯ್ಯಲು ಸಿದ್ಧತೆ ಮಾಡಲಾಗುವುದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮದವರ ಜತೆ ಶನಿವಾರ ಮಾತನಾಡಿದ ಅವರು, ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರತಿ ತಾಲೂಕಿನಲ್ಲಿ ಆರಂಭಿಸಬೇಕು. ಜತೆಗೆ, ಹೆಚ್ಚುವರಿ ಬೆಂಬಲ ಬೆಲೆ ನೀಡಿ ಸರಕನ್ನು ರೈತರಿಂದ ಖರೀದಿಸಬೇಕು. ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು. ಈಗಾಗಲೇ ಮೆಕ್ಕೆಜೋಳ ಬೆಂಬಲಬೆಲೆ ಯೋಜನೆಯಡಿ ಸರ್ಕಾರ ಖರೀದಿಸುವುದಾಗಿ ಘೋಷಿಸಿದೆ. ಆದರೂ ಬೆಂಬಲ ಬೆಲೆ ಮೊತ್ತ ಕಡಿಮೆಯೆಂದು, ಹೆಚ್ಚುವರಿ ದರ ಕೊಡಬೇಕು ಎಂದು ರೈತರ ಹೋರಾಟ ಜಾರಿಯಲ್ಲಿದೆ. ಆದರೆ, ರಾಜ್ಯ ಸರ್ಕಾರ ರೈತರ ಜತೆ ಚೆಲ್ಲಾಟ ಆಡುತ್ತಿದೆ ಎಂದರು.

ಕಳೆದ ವರ್ಷ ರಾಜ್ಯದಲ್ಲಿ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಮೆಕ್ಕೆಜೋಳ ಬೆಳೆದಿತ್ತು. ಈ ವರ್ಷ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದರೂ 54 ಲಕ್ಷ ಮೆಟ್ರಿಕ್ ಟನ್ ಬೆಳೆಯಲಾಗಿದ್ದು, 2 ಲಕ್ಷ ಮೆಟ್ರಿಕ್ ಟನ್ ನಷ್ಟ ಆಗಿದೆ. ಇಂತಹ ಸಂದರ್ಭದಲ್ಲಿ ರೈತರನ್ನು ಉಳಿಸಲು ಏನು ಮಾಡಬೇಕು ಎಂಬುದನ್ನು ಸರ್ಕಾರ ಯೋಚಿಸಬೇಕು. ಆದರೆ, ರಾಜ್ಯ ಸರ್ಕಾರಕ್ಕೆ ರೈತಪರ ಚಿಂತನೆಯಿಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನಡುವೆ ನಡೆಯುತ್ತಿರುವ ಪೈಪೋಟಿ, ಕಚ್ಚಾಟ ನೋಡುತ್ತಿದ್ದರೆ ಕಾಂಗ್ರೆಸ್‌ಗೆ ಹೈಕಮಾಂಡ್ ಇದೆಯೋ? ಇಲ್ಲವೋ? ಎಂಬ ಅನುಮಾನ ಬರುತ್ತಿದೆ. ಸಮಾಜವಾದಿ ಪಟ್ಟಿ ಕಟ್ಟಿಕೊಂಡು ದುಬಾರಿ ವಾಚ್ ಕೈಗೇರಿಸಿಕೊಳ್ಳುವವರ ಎಲ್ಲ ವೈಭವ ನೋಡಿದ್ದೇವೆ. ಪ್ರಸ್ತುತ ಅಂತಹವರ ಆಡಳಿತದ ಜತೆ ನಡವಳಿಕೆಯೂ ಹಳ್ಳ ಹಿಡಿದಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ
ಅಂಬೇಡ್ಕರ್ ಜೀವನ ಮೌಲ್ಯಗಳು ಜಗತ್ತಿಗೆ ಆದರ್ಶ: ಶಾಸಕ ಶ್ರೀನಿವಾಸ