ಬೇಗಾನೆ ರಾಮಯ್ಯನವರ ವೈಕುಂಠ ಸಮಾರಾಧನೆ

KannadaprabhaNewsNetwork |  
Published : May 18, 2025, 11:53 PM IST
ಪೋಟೋ: 18ಎಸ್‌ಎಂಜಿಕೆಪಿ05ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆಯಲ್ಲಿ ಗಣ್ಯರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆ ಭಾನುವಾರ ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ನಡೆಯಿತು.

ಶಿವಮೊಗ್ಗ: ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆ ಭಾನುವಾರ ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ನಡೆಯಿತು. ವೈಕುಂಠ ಸಮಾರಾಧನೆಯಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು‌. ವೈಕುಂಠ ಸಮಾರಾಧನೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕ ರಾಜುಗೌಡ, ಗೋಪಾಲಕೃಷ್ಣ ಬೇಳೂರು ಭಾಗವಹಿಸಿ, ಬೇಗಾನೆ ರಾಮಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ವೇಳೆ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ , ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ್, ಎಐಸಿಸಿ ಕಾರ್ಯದರ್ಶಿ ಮತ್ತು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ, ಜಿ.ಎಚ್ ಶ್ರೀನಿವಾಸ್, ಮಾಜಿ ವಿಧಾನಪರಿಷತ್ ಸದಸ್ಯ ಗಾಯತ್ರಿ ಶಾಂತೇಗೌಡ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಶಾಲೆಗಿಂತ ಅಂಗನವಾಡಿಯಲ್ಲಿ ಉತ್ತಮ ಶಿಕ್ಷಣ
ಲಕ್ಷ್ಮೇಶ್ವರದಲ್ಲಿ ಸಂಭ್ರಮದ ಅಗಸ್ತ್ಯ ತೀರ್ಥ ಜಾತ್ರಾ ಮಹೋತ್ಸವ