ಎಲ್ಲಾ ಕಟ್ಟಡಗಳ ತೆರವುಗೊಳಿಸಿದ ಬಳಿಕವೇ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ

KannadaprabhaNewsNetwork |  
Published : May 11, 2026, 02:30 AM IST
ಬ್ಯಾಡಗಿ ಮುಖ್ಯರಸ್ತೆಯಲ್ಲಿನ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕವೇ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ, ರಾಜ್ಯ ರೈತ ಸಂಘ, ಕರವೇ, ಜಯಕರ್ನಾಟಕ, ಡಿ.ಎಸ್.ಎಸ್. ಹಾಗೂ ಅಂಗವಿಕಲರ ಸಂಘಟನೆ ಸೇರಿದಂತೆ ಸಾರ್ವಜನಿಕರು ಆಗ್ರಹಿಸಿದರು. | Kannada Prabha

ಸಾರಾಂಶ

ಅವರಿವರೆನ್ನದೇ ಮುಖ್ಯರಸ್ತೆಯಲ್ಲಿನ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕವೇ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ, ರಾಜ್ಯ ರೈತ ಸಂಘ, ಕರವೇ, ಜಯಕರ್ನಾಟಕ, ಡಿ.ಎಸ್.ಎಸ್. ಹಾಗೂ ಅಂಗವಿಕಲರ ಸಂಘಟನೆ ಸೇರಿದಂತೆ ಸಾರ್ವಜನಿಕರು ಆಗ್ರಹಿಸಿದ ಘಟನೆ ನೆಡಯಿತು.

ಬ್ಯಾಡಗಿ: ಅವರಿವರೆನ್ನದೇ ಮುಖ್ಯರಸ್ತೆಯಲ್ಲಿನ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕವೇ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ, ರಾಜ್ಯ ರೈತ ಸಂಘ, ಕರವೇ, ಜಯಕರ್ನಾಟಕ, ಡಿ.ಎಸ್.ಎಸ್. ಹಾಗೂ ಅಂಗವಿಕಲರ ಸಂಘಟನೆ ಸೇರಿದಂತೆ ಸಾರ್ವಜನಿಕರು ಆಗ್ರಹಿಸಿದ ಘಟನೆ ನೆಡಯಿತು.

ಈ ಕುರಿತು ಮಾತನಾಡಿದ ಅಗಲೀಕರಣ ಹೋರಾಟ ಸಮಿತಿ ಗೌರವಾಧ್ಯಕ್ಷ ಜಿಲ್ಲಾಡಳಿತ ಕೇವಲ ಭೂಸ್ವಾಧೀನದ ಪರಿಹಾರದ ಮೊತ್ತ ಪಡೆದವರ ಕಟ್ಟಡಗಳನ್ನಷ್ಟೇ ತೆರವುಗೊಳಿಸುತ್ತಿದ್ದು ಇದರಿಂದ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನಗಳು ಮೂಡುತ್ತಿದ್ದು, ಹಣ ಪಡೆದವರ ವಿಶ್ವಾಸಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದೆ.

ನ್ಯಾಯಾಲಯಕ್ಕೆ ಹಣ ಸಲ್ಲಿಸಿ: ಪರಿಹಾರ ಹಣ ಬೇಡ ಎಂದವರ ಮೊತ್ತವನ್ನು ಕೂಡಲೇ ನ್ಯಾಯಾಲಯಕ್ಕೆ ಸಲ್ಲಿಸಿ ಅಗಲೀಕರಣದಲ್ಲಿ ಏಕರೂಪತೆ ತೋರಿಸಬೇಕು, ಇಲ್ಲದಿದ್ದಲ್ಲಿ ಜಿಲ್ಲಾಡಳಿತದ ಮೇಲೆ ಸಂಶಯ ವ್ಯಕ್ತವಾಗುತ್ತಿದ್ದು ಇನ್ನಿಲ್ಲದ ಕಾರಣಗಳನ್ನು ಹೇಳುತ್ತಾ ಅಗಲೀಕರಣಕ್ಕೆ ವಿಳಂಬವಾಗುವ ಸಾಧ್ಯತೆಗಳಿವೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಸೇರಿದಂತೆ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಮಾಳಗಿ, ಶಿವಯೋಗಿ ಶಿರೂರ, ಸುರೇಶ ಛಲವಾದಿ, ವಿನಾಯಕ ಕಂಬಳಿ, ಮಹೇಶ ಉಜನಿ, ಈರಣ್ಣ ಬಣಕಾರ, ಬಸವರಾಜ ಸಂಕಣ್ಣನವರ, ಶಿವು ಕಲ್ಲಾಪೂರ, ಹರೀಶಕುಮಾರ ರಿತ್ತಿ, ನ್ಯಾಯವಾದಿ ಮುಳಗುಂದ ಹಾಗೂ ಇನ್ನಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಸ್ನೇಹಿ ಯೋಜನೆಗಳು ಅಗತ್ಯ: ಸತೀಶ್
ಸಮಾಜವನ್ನು ಸನ್ಮಾರ್ಗದೆಡೆಗೆ ಸಾಗಿಸಿದ ಮಲ್ಲಮ್ಮ