400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ

Published : Feb 02, 2026, 06:36 AM IST
Robbery

ಸಾರಾಂಶ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟಲ್ಲಿ ನಡೆದಿದ್ದ 2 ಕಂಟೇನರ್‌ಗಳಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ಹಳೇ ನೋಟು ದರೋಡೆ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಠಾಣೆಗೆ ಶರಣಾಗಿದ್ದಾನೆ. ಬಳಿಕ ಆತನನ್ನು ಬಂಧಿಸಲಾಗಿದೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟಲ್ಲಿ ನಡೆದಿದ್ದ 2 ಕಂಟೇನರ್‌ಗಳಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ಹಳೇ ನೋಟು ದರೋಡೆ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಠಾಣೆಗೆ ಶರಣಾಗಿದ್ದಾನೆ. ಬಳಿಕ ಆತನನ್ನು ಬಂಧಿಸಲಾಗಿದೆ.

ಬಂಧಿತರ ಸಂಖ್ಯೆ ಎಂಟಕ್ಕೆ

ಇದರಿಂದ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ. ಮಹಾರಾಷ್ಟ್ರ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಎಲ್ಲಾ ಆಯಾಮಗಳಲ್ಲಿಯೂ ಎಸ್‌ಐಟಿ ತನಿಖೆ

ಪ್ರಕರಣ ಸಂಬಂಧ ಉದ್ಯಮಿ, ದೂರುದಾರ ಸಂದೀಪ್ ದತ್ತಾ ಪಾಟೀಲ್ ಅಪಕರಣ ಮತ್ತು ಹಣ ದರೋಡೆ ಸಂಬಂಧ ಎಲ್ಲಾ ಆಯಾಮಗಳಲ್ಲಿಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಇತ್ತೀಚೆಗೆ ವೈರಲ್ ಆದ ಆಡಿಯೋ ಸಂಬಂಧವೂ ಪರಿಶೀಲನೆ ನಡೆಸಲಾಗುತ್ತಿದೆ.

PREV
Stay informed with the latest news from Belagavi district (ಬೆಳಗಾವಿ ಸುದ್ದಿ) — covering local governance, industry & economy, agriculture and farming, heritage & tourism, community events, civic issues, and district-level developments in Belagavi only on Kannada Prabha News.
Read more Articles on

Recommended Stories

ಬೆಳಗಾವಿಯಲ್ಲಿ ಬೆಲ್ಕಾನ್‌-2026 ಪ್ರದರ್ಶನ
ಗುಡ್ಡದೆಲ್ಲೆಡೆ ಉಧೋ... ಉಧೋ... ಉದ್ಘಾರ