ಕನ್ನಡಪ್ರಭ ವಾರ್ತೆ ದಾವಣಗೆರೆ
ಬೇಲಿಕೇರಿ ಅದಿರು ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಬಳ್ಳಾರಿ, ಚಿತ್ರದುರ್ಗ ಜಿಲ್ಲೆಯ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಕಬ್ಬಿಣದ ಅದಿರು ವಿದೇಶಗಳಿಗೆ ರಫ್ತಾಗುತ್ತಿತ್ತು. 2009ರ ಮಾರ್ಚ್ 20ರಂದು ಅರಣ್ಯ ಇಲಾಖೆಯ ₹350 ಕೋಟಿ ಮೌಲ್ಯದ 8.5 ಲಕ್ಷ ಮೆಟ್ರಿಕ್ ಟನ್ ಅದಿರು ಜಪ್ತಿ ಮಾಡಿತ್ತು. 39,700 ಮೆಟ್ರಿಕ್ ಟನ್ ಚೀನಾ ದೇಶಕ್ಕೆ ರಫ್ತಾಗಿತ್ತು ಎಂದು ಅವರು ದೂರಿದರು.
ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ತಂಡ ಅಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನ್ಯಾಯಾಲಯದ ಆದೇಶ ನಾವು ಸ್ವಾಗತಿಸುತ್ತೇವೆ. ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅನೇಕ ಭ್ರಷ್ಟ ರಾಜಕಾರಣಿಗಳೂ ಇದ್ದಾರೆ. ನ್ಯಾಯಾಂಗವು ಅದನ್ನೆಲ್ಲಾ ಪರಿಶೀಲಿಸಬೇಕು. ಅಕ್ರಮ ಗಣಿಗಾರಿಕೆಯು ಅರಣ್ಯ ನಾಶ ಮಾಡುತ್ತಿದೆ. ಇದರಿಂದ ವನ್ಯಜೀವಿಗಳಿಗೆ ಸಂಚಕಾರ ಬಂದಿದೆ. ವನ್ಯಜೀವಿಗಳು ಹಾಗೂ ಮಾನವ ಸಂಘರ್ಷ ನಿತ್ಯ ನಡೆಯುತ್ತಿರುವುದೂ ಪರಿಸರ ನಾಶವೇ ಕಾರಣ ಎಂದು ಅವರು ಆರೋಪಿಸಿದರು.
- ಚಿತ್ರದುರ್ಗದ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಮುಖಂಡರ ಆಗ್ರಹ
ಮಾಲಿನ್ಯಕಾರಕ, ಅಪಾಯಕಾರಿ ಪಟಾಕಿಗಳ ಬದಲಿಗೆ ಹಸಿರು ಪಟಾಕಿಗಳ ಮಾರಾಟಕ್ಕೆ ಜಿಲ್ಲಾಧಿಕಾರಿ ಆದೇಶ ಹೊರಡಿಸಬೇಕು ಎಂದು ಎಸ್.ಟಿ.ನವೀನಕುಮಾರ ಒತ್ತಾಯಿಸಿದರು.
ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ ಅರಸ್ ಮಾತನಾಡಿ, ಸಾಮಾನ್ಯ ಪಟಾಕಿಗಿಂತ ಹಸಿರು ಪಟಾಕಿಗಳು ಭಿನ್ನ. ಹಸಿರು ಪಟಾಕಿಗಳನ್ನು ನ್ಯಾಷನಲ್ ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್ ರೀಸರ್ಚ್ ಇನ್ಸ್ಟಿಟ್ಯೂಟ್ ಆವಿಷ್ಕರಿಸಿದೆ. ಸಾಮಾನ್ಯ ಪಟಾಕಿಯಂತೆ ಇವು ಶಬ್ಧ ಮಾಡುತ್ತವೆ. ಆದರೆ, ಮಾಲಿನ್ಯ ಕಡಿಮೆ. ಅಲ್ಲದೇ, ಅಲ್ಯುಮಿನಿಯಂ, ಬೇರಿಯಂ, ಪೊಟ್ಯಾಷಿಯಂ ನೈಟ್ರೇಟ್, ಕಾರ್ಬನ್ಗಳನ್ನು ಹಸಿರು ಪಟಾಕಿಯಲ್ಲಿ ಬಳಸುವುದಿಲ್ಲ. ಹಸಿರು ಪಟಾಕಿಯಿಂದ ಬರುವ ಶಬ್ಧ ಸಹ ಕಡಿಮೆ. ಅಪಾಯಗಳು ನಿಯಂತ್ರಣದಲ್ಲಿರುತ್ತವೆ ಎಂದ ಅವರು, ರಾಜ್ಯಾದ್ಯಂತ ವೇದಿಕೆ ನೇತೃತ್ವದಲ್ಲಿ ಪಟಾಕಿ ಕುರಿತು ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಹಿನ್ನೆಲೆ ಪರಿಸರಕ್ಕೆ ಹಾನಿಯಾಗದಂತೆ ಎಲ್ಲರೂ ಜಾಗೃತರಾಗಬೇಕು ಎಂದು ಮನವಿ ಮಾಡಿದರು.