ಶ್ರೀಶೈಲ ಮಠದ
ಬೆಳಗಾವಿ- ಕಿತ್ತೂರು- ಧಾರವಾಡ ರೈಲು ಮಾರ್ಗ ಯೋಜನೆ ವಿಳಂಬವಾಗುತ್ತಿದೆ. ಆಮೆ ನಡಿಗೆಯಲ್ಲಿ ಸಾಗುತ್ತಿರುವ ಈ ಯೋಜನೆಗೆ ಭೂಸ್ವಾಧೀನ ಸಮಸ್ಯೆ ಎದುರಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯವು ರೈಲ್ವೆ ಇಲಾಖೆಗೆ ಭೂಮಿಯನ್ನು ಹಸ್ತಾಂತರಿಸಬೇಕಾಗಿದೆ. ಪದೇ ಪದೆ ಸಭೆ ನಡೆಸುವುದಕ್ಕೆ ಈ ಯೋಜನೆ ಸೀಮಿತವಾಗಿದೆ.
ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಕನಸಿನ ಯೋಜನೆಯಾಗಿತ್ತು. ಸೆಪ್ಟೆಂಬರ್ 2019 ರಲ್ಲಿ ಕೇಂದ್ರ ಸರ್ಕಾರವು 73 ಕಿಮೀ ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಯೋಜನೆಗೆ ಅನುಮೋದನೆ ನೀಡಿತು. ಯೋಜನೆಯ ಒಟ್ಟು ವೆಚ್ಚ ₹927 ಕೋಟಿ ಆಗಿದ್ದು, ಅದರಲ್ಲಿ ರಾಜ್ಯ ಸರ್ಕಾರ ಅರ್ಧದಷ್ಟು ಹಣವನ್ನು ನೀಡಲಿದ್ದು, ಅಗತ್ಯವಿರುವ ಭೂಮಿಯನ್ನು ರೈಲ್ವೆ ಇಲಾಖೆಗೆ ಉಚಿತವಾಗಿ ನೀಡಲಾಗುವುದು. ಯೋಜನೆಯಡಿ ಬೆಳಗಾವಿ ಜಿಲ್ಲೆಯ ತೇಗೂರು, ಕಿತ್ತೂರು, ಹುಲಿಕಟ್ಟಿ, ಎಂ.ಕೆ.ಹುಬ್ಬಳ್ಳಿ, ಬಾಗೇವಾಡಿ, ಕಣವಿ ಕುರುವಿನಕೊಪ್ಪ, ಮತ್ತು ದೇಸೂರಿನಲ್ಲಿ ರೈಲು ನಿಲ್ದಾಣಗಳನ್ನು ನಿರ್ಮಿಸಲಾಗುವುದು. ಧಾರವಾಡ ಜಿಲ್ಲೆಯ ಕ್ಯಾರಕೊಪ್ಪ ಮತ್ತು ಮುಮ್ಮಿಗಟ್ಟಿ ಗ್ರಾಮಗಳ ಬಳಿಯೂ ರೈಲು ನಿಲ್ದಾಣಗಳನ್ನು ನಿರ್ಮಿಸಲಾಗುವುದು. ಕ್ಯಾರಕೊಪ್ಪ ಮತ್ತು ದೇಸೂರಿನಲ್ಲಿ ಜಂಕ್ಷನ್ಗಳನ್ನು ನಿರ್ಮಿಸುವ ಯೋಜನೆಯ ಭಾಗವಾಗಿದೆ.ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗ ಅನುಷ್ಠಾನಕ್ಕೆ ಒಟ್ಟು 826 ಎಕರೆ ಜಮೀನು ಗುರುತಿಸಲಾಗಿದ್ದು, ಈ ಪೈಕಿ ಧಾರವಾಡ ಜಿಲ್ಲೆಯಲ್ಲಿ 226 ಎಕರೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 600 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳ ಪ್ರಕಾರ, ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, ಬೆಳಗಾವಿಯ ಮೂರು ಗ್ರಾಮಗಳ ರೈತರು ಭೂ ಸ್ವಾಧೀನಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಸುಮಾರು 155 ಎಕರೆ ಭೂಸ್ವಾಧೀನ ಬಾಕಿ ಇದೆ. ಭೂಮಿ ಹಸ್ತಾಂತರವಾದ ನಂತರ ರೈಲ್ವೆ ಇಲಾಖೆ ಟೆಂಡರ್ ಕರೆಯಬೇಕಾಗುತ್ತದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರೈತರಿಂದ ಭೂಮಿ ಸ್ವಾಧೀನಪಡಿಸಿಕೊಳ್ಳುವ ಕೆಲಸವನ್ನು ಕೆಐಎಡಿಬಿ ಇನ್ನೂ ಮಾಡಿಲ್ಲ. ರೈತರು ಭೂಮಿ ಕೊಡಲು ಸುತಾರಾಂ ಒಪ್ಪುತ್ತಿಲ್ಲ. ಇದರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕಳೆದ 5 ವರ್ಷಗಳಲ್ಲಿ ಈ ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹಲವು ಸಭೆಗಳನ್ನು ನಡೆಸಿರುವುದು ಕೂಡ ಇಲ್ಲಿ ಗಮನಾರ್ಹ.ಕೇವಲ ಸಭೆಗಳಿಗೆ ಸೀಮಿತವಾಯಿತೇ?:ಜಗದೀಶ ಶೆಟ್ಟರ್,